ದೇವರ ಜೀವನಹಳ್ಳಿಯಲ್ಲಿ ಸರ್ಕಾರಿ ಉರ್ದು ಮಾದರಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದ ದಿಲ್ನಾಜ್ ಬೇಗಂ ಅವರನ್ನು ಕೋವಿಡ್–19 ಸಮೀಕ್ಷಾ ಕಾರ್ಯಕ್ಕೆ ನಿಯೋಜಿಸಲಾಗಿತ್ತು. ಜ್ವರ ಮತ್ತು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಚಿಕಿತ್ಸೆಗೆ ದಾಖಲಾಗುವ ಸಲುವಾಗಿ ಅವರು ಮೂರು ದಿನಗಳು ಖಾಸಗಿ ಆಸ್ಪತ್ರೆಗಳಿಗೆ ಅಲೆದಾಡಿದ್ದರು. ಎಲ್ಲಿಯೂ ಅವರನ್ನು ದಾಖಲಿಸಿಕೊಂಡಿರಲಿಲ್ಲ. ಬಳಿಕ ಶಿವಾಜಿನಗರದ ಬೌರಿಂಗ್ ಆಸ್ಪತ್ರೆಗೆ ಅವರು ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಬೆಳಿಗ್ಗೆ ಸಾವಿಗೀಡಾದರು.