‘ಕ್ರೈಸ್ ಕಾಯಂ ಸಿಬ್ಬಂದಿಯನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕು, ಶಿಕ್ಷಕರಿಗೆ/ಪ್ರಾಂಶುಪಾಲರಿಗೆ ಜಿ.ಕುಮಾರ್ ನಾಯ್ಕ್ ವರದಿಯ ಶಿಫಾರಸುಗಳ ಅನ್ವಯ ಒಂದು ಹೆಚ್ಚುವರಿ ವೇತನ ಬಡ್ತಿ ನೀಡಬೇಕು, ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ಮಾಡಬೇಕು, ಅರ್ಹ ಶಿಕ್ಷಕರಿಗೆ ಪ್ರಾಂಶುಪಾಲರಾಗಿ ಪದೋನ್ನತಿ ನೀಡಬೇಕು, ವೈಜ್ಞಾನಿಕ ವರ್ಗಾವಣೆ ಮಾರ್ಗಸೂಚಿ ಅನುಸರಿಸಬೇಕು, ಹೈದರಾಬಾದ್ ಕರ್ನಾಟಕ ಭಾಗದವರಿಗೆ 371 ಜೆ ನಿಯಮದಂತೆ ಪ್ರತ್ಯೇಕ ಜ್ಯೇಷ್ಠತಾ ಪಟ್ಟಿ ತಯಾರಿಸಬೇಕು, ಮೂಲ ವೇತನದ ಶೇ 10ರಷ್ಟು ವಿಶೇಷ ಭತ್ಯೆ ನೀಡಬೇಕು, ಮರಣ ಹೊಂದಿದ ನೌಕರರ ಕುಟುಂಬಗಳಿಗೆ ಅನುಕಂಪದ ಆಧಾರದಲ್ಲಿ ನೇಮಕಾತಿ ಮಾಡಬೇಕು’ ಎಂದು ಅವರು ಆಗ್ರಹಿಸಿದರು.