ಖಾಸಗಿ ಶಾಲೆಗಳ ಆರ್ಥಿಕ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸದೆ ಅವೈಜ್ಞಾನಿಕವಾಗಿ ಶುಲ್ಕ ಕಡಿತ ಮಾಡಿರುವುದು, ಹಳೆಯ ಶಾಲೆಗಳಿಗೆ ಹೊಸ ಶಾಲೆಯ ಷರತ್ತು ವಿಧಿಸಿ, ಮಾನ್ಯತೆ ನವೀಕರಣ ಹೆಸರಲ್ಲಿ ಭ್ರಷ್ಟಾಚಾರ, ಕಡ್ಡಾಯ ದಾಖಲಾತಿ, ಹಾಜರಾತಿ, ಕನಿಷ್ಠ ಮೌಲ್ಯ ಮಾಪನಕ್ಕೆ ಒತ್ತು ನೀಡದಿರುವುದು, ಕಲ್ಯಾಣ ಕರ್ನಾಟಕ ಭಾಗದ ಶಾಲೆಗಳಿಗೆ 371 (ಜೆ) ಬೇಡಿಕೆಗಳ ಈಡೇರಿಕೆ, ಪ್ರಾಥಮಿಕ ಶಾಲೆ ಪುನರ್ ಆರಂಭದ ಗೊಂದಲ, ಆರ್ಟಿಇ ಹಣ ಮರುಪಾವತಿ, ಭ್ರಷ್ಟಾಚಾರದಲ್ಲಿ ತೊಡಗಿರುವ ಬಿಇಒ ಹಾಗೂ ಡಿಡಿಪಿಐ ಕಚೇರಿಗೆ ನಿಯಂತ್ರಣ ಹಾಕದೆ ಇರುವುದನ್ನು ಪ್ರತಿಭಟಿಸಲಾಗುತ್ತಿದೆ.