<p><strong>ಬೆಂಗಳೂರು</strong>: ಯುವ ಪೀಳಿಗೆಯನ್ನು ರೂಪಿಸುವ ಹೊಣೆಗಾರಿಕೆ ಶಿಕ್ಷಕರ ಮೇಲಿದೆ ಎಂದು ಕ್ಯಾನ್ಸರ್ ತಜ್ಞೆ ವಿಜಯಲಕ್ಷ್ಮಿ ದೇಶಮಾನೆ ಹೇಳಿದರು.</p>.<p>ಎನ್ಆರ್ ಕಾಲೋನಿಯ ಆಚಾರ್ಯ ಪಾಠಶಾಲಾ ವಾಣಿಜ್ಯ ಕಾಲೇಜಿನಲ್ಲಿ ಶುಕ್ರವಾರ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಹಾಗೂ ಸಂಸ್ಥಾಪಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಯುವ ಪೀಳಿಗೆಗೆ ಈಗ ಜ್ಞಾನ ಪಡೆಯುವುದು ಕಷ್ಟವಲ್ಲ. ಆದರೆ ಸರಿಯಾದ ಜ್ಞಾನ ಪಡೆದುಕೊಳ್ಳಬೇಕೆಂದರೆ ಶಿಕ್ಷಕರ ಮಾರ್ಗದರ್ಶನ ಬೇಕೇ ಬೇಕು. ಯುವ ಪೀಳಿಗೆಯನ್ನು ಜವಾಬ್ದಾರಿಯುತ ಪ್ರಜೆಗಳನ್ನಾಗಿಸಲು ಶಿಕ್ಷಕರು ಶ್ರಮಿಸಬೇಕು ಎಂದು ಸಲಹೆ ನೀಡಿದರು.</p>.<p>ಎಪಿಎಸ್ ವಿಶ್ವಸ್ಥ ಸಂಸ್ಥೆ ಅಧ್ಯಕ್ಷ ವಿಷ್ಣುಭರತ್ ಆಲಂಪಲ್ಲಿ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಎ.ಪ್ರಕಾಶ್, ಟ್ರಸ್ಟಿ ಎ.ಆರ್. ಆಚಾರ್ಯ, ಎ.ಮುರಳೀಧರ್, ರಾಮಪ್ರಸಾದ್, ಆರ್.ವಿ.ವಿಜಯಭಾಸ್ಕರ್, ಎ.ಪಿ.ಆಚಾರ್ಯ ಹಾಜರಿದ್ದರು. ಅತ್ಯುತ್ತಮ ಸಾಧನೆ ಮಾಡಿದ ಅಧ್ಯಾಪಕರನ್ನು ಗೌರವಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಯುವ ಪೀಳಿಗೆಯನ್ನು ರೂಪಿಸುವ ಹೊಣೆಗಾರಿಕೆ ಶಿಕ್ಷಕರ ಮೇಲಿದೆ ಎಂದು ಕ್ಯಾನ್ಸರ್ ತಜ್ಞೆ ವಿಜಯಲಕ್ಷ್ಮಿ ದೇಶಮಾನೆ ಹೇಳಿದರು.</p>.<p>ಎನ್ಆರ್ ಕಾಲೋನಿಯ ಆಚಾರ್ಯ ಪಾಠಶಾಲಾ ವಾಣಿಜ್ಯ ಕಾಲೇಜಿನಲ್ಲಿ ಶುಕ್ರವಾರ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಹಾಗೂ ಸಂಸ್ಥಾಪಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಯುವ ಪೀಳಿಗೆಗೆ ಈಗ ಜ್ಞಾನ ಪಡೆಯುವುದು ಕಷ್ಟವಲ್ಲ. ಆದರೆ ಸರಿಯಾದ ಜ್ಞಾನ ಪಡೆದುಕೊಳ್ಳಬೇಕೆಂದರೆ ಶಿಕ್ಷಕರ ಮಾರ್ಗದರ್ಶನ ಬೇಕೇ ಬೇಕು. ಯುವ ಪೀಳಿಗೆಯನ್ನು ಜವಾಬ್ದಾರಿಯುತ ಪ್ರಜೆಗಳನ್ನಾಗಿಸಲು ಶಿಕ್ಷಕರು ಶ್ರಮಿಸಬೇಕು ಎಂದು ಸಲಹೆ ನೀಡಿದರು.</p>.<p>ಎಪಿಎಸ್ ವಿಶ್ವಸ್ಥ ಸಂಸ್ಥೆ ಅಧ್ಯಕ್ಷ ವಿಷ್ಣುಭರತ್ ಆಲಂಪಲ್ಲಿ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಎ.ಪ್ರಕಾಶ್, ಟ್ರಸ್ಟಿ ಎ.ಆರ್. ಆಚಾರ್ಯ, ಎ.ಮುರಳೀಧರ್, ರಾಮಪ್ರಸಾದ್, ಆರ್.ವಿ.ವಿಜಯಭಾಸ್ಕರ್, ಎ.ಪಿ.ಆಚಾರ್ಯ ಹಾಜರಿದ್ದರು. ಅತ್ಯುತ್ತಮ ಸಾಧನೆ ಮಾಡಿದ ಅಧ್ಯಾಪಕರನ್ನು ಗೌರವಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>