ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧರಣಿ ಕೈಬಿಟ್ಟ ಶಿಕ್ಷಕರು

Last Updated 6 ಸೆಪ್ಟೆಂಬರ್ 2022, 22:01 IST
ಅಕ್ಷರ ಗಾತ್ರ

ಬೆಂಗಳೂರು: ‘ತವರು ಜಿಲ್ಲೆಗೆ ವರ್ಗಾವಣೆ ನೀಡಬೇಕು’ ಎಂದು ಆಗ್ರಹಿಸಿ ಪ್ರಾಥಮಿಕ ಹಾಗೂ ಪ್ರೌಢಶಾಲೆ ಶಿಕ್ಷಕರು ನಗರದಲ್ಲಿ ನಡೆಸುತ್ತಿದ್ದ ಧರಣಿಯನ್ನು ಮಂಗಳವಾರ
ಅಂತ್ಯಗೊಳಿಸಿದ್ದಾರೆ.

ರಾಜ್ಯದ ವಿವಿಧ ಜಿಲ್ಲೆಗಳಿಂದ ನಗರಕ್ಕೆ ಸೋಮವಾರ ಬಂದಿದ್ದ ಶಿಕ್ಷಕರು, ಸ್ವಾತಂತ್ರ್ಯ ಉದ್ಯಾನದಲ್ಲಿ ಕುಳಿತು ಧರಣಿ ನಡೆಸುತ್ತಿದ್ದರು. ಕೆಲ ಶಿಕ್ಷಕರು, ತಮ್ಮೊಂದಿಗೆ ಮಕ್ಕಳನ್ನೂ ಕರೆತಂದಿದ್ದರು.

ಪ್ರತಿಭಟನಾ ಸ್ಥಳಕ್ಕೆ ಮಂಗಳವಾರ ಭೇಟಿ ನೀಡಿದ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ, ‘ವರ್ಗಾವಣೆ ಬೇಡಿಕೆ ಈಡೇರಿಕೆ ಬಗ್ಗೆ ಸರ್ಕಾರದ ಜೊತೆ ಮಾತುಕತೆ ನಡೆಸಲಾಗುವುದು. ನಿಮ್ಮೊಂದಿಗೆ ನಾನಿದ್ದೇನೆ. ಸದ್ಯ ಪ್ರತಿಭಟನೆ ಕೈಬಿಡಿ’ ಎಂದರು. ಇದಕ್ಕೆ ಒಪ್ಪಿದ ಪ್ರತಿಭಟನಕಾರರು, ಪ್ರತಿಭಟನೆ ಅಂತ್ಯಗೊಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT