<p><strong>ಬೆಂಗಳೂರು:</strong> ‘ಅತಿಥಿ ಶಿಕ್ಷಕರಿಗೆ ಸೇವಾ ಭದ್ರತೆ ಒದಗಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೂನ್ 13 ರಿಂದ ಶಾಲೆ ತೊರೆದು ಪ್ರತಿಭಟಿಸಲಾಗುವುದು’ ಎಂದು ಪ್ರಾಥಮಿಕ ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರ ಸಂಘ ತಿಳಿಸಿದೆ.</p>.<p>ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಗೌರವ ಅಧ್ಯಕ್ಷ ಎನ್. ಅನಂತನಾಯ್ಕ್, ಅಧ್ಯಕ್ಷ ಹನುಮಂತ ಎಚ್.ಎಸ್., ‘ಅತಿಥಿ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯಲ್ಲಿ ಮೆರಿಟ್ ಪದ್ಧತಿಯನ್ನು ಕೈಬಿಟ್ಟು, ಸೇವಾ ಹಿರಿತನವನ್ನು ಪರಿಗಣಿಸಬೇಕು’ ಎಂದು ಒತ್ತಾಯಿಸಿದರು.</p>.<p>‘ಈಗ ವರ್ಷದಲ್ಲಿ ಕೇವಲ 10 ತಿಂಗಳು ಮಾತ್ರ ಕೆಲಸವಿದ್ದು, ತಿಂಗಳಿಗೆ ₹12 ಸಾವಿರ ವೇತನ ನೀಡಲಾಗುತ್ತದೆ. ಇದರಿಂದ, ಜೀವನ ನಿರ್ವಹಣೆ ಕಷ್ಟವಾಗಿದೆ. ಆದ್ದರಿಂದ ಗೌರವಧನದ ಮೊತ್ತವನ್ನು ತಿಂಗಳಿಗೆ ₹25 ಸಾವಿರಕ್ಕೆ ಹೆಚ್ಚಿಸಬೇಕು’ ಎಂದು ಒತ್ತಾಯಿಸಿದರು.</p>.<p>‘ನೇಮಕಾತಿ ಸಂದರ್ಭದಲ್ಲಿ 5 ಕೃಪಾಂಕಗಳನ್ನು ನೀಡಬೇಕು. ಸುಪ್ರೀಂ ಕೋರ್ಟ್ನ ಆದೇಶದಂತೆ ಈ ವರ್ಷದಿಂದ ಸಮಾನ ಕೆಲಸಕ್ಕೆ ಸಮಾನ ವೇತನ ಜಾರಿಗೊಳಿಸಬೇಕು. ಅತಿಥಿ ಶಿಕ್ಷಕರ ಸೇವೆಯನ್ನು ಕಾಯಂಗೊಳಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಅತಿಥಿ ಶಿಕ್ಷಕರಿಗೆ ಸೇವಾ ಭದ್ರತೆ ಒದಗಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೂನ್ 13 ರಿಂದ ಶಾಲೆ ತೊರೆದು ಪ್ರತಿಭಟಿಸಲಾಗುವುದು’ ಎಂದು ಪ್ರಾಥಮಿಕ ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರ ಸಂಘ ತಿಳಿಸಿದೆ.</p>.<p>ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಗೌರವ ಅಧ್ಯಕ್ಷ ಎನ್. ಅನಂತನಾಯ್ಕ್, ಅಧ್ಯಕ್ಷ ಹನುಮಂತ ಎಚ್.ಎಸ್., ‘ಅತಿಥಿ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯಲ್ಲಿ ಮೆರಿಟ್ ಪದ್ಧತಿಯನ್ನು ಕೈಬಿಟ್ಟು, ಸೇವಾ ಹಿರಿತನವನ್ನು ಪರಿಗಣಿಸಬೇಕು’ ಎಂದು ಒತ್ತಾಯಿಸಿದರು.</p>.<p>‘ಈಗ ವರ್ಷದಲ್ಲಿ ಕೇವಲ 10 ತಿಂಗಳು ಮಾತ್ರ ಕೆಲಸವಿದ್ದು, ತಿಂಗಳಿಗೆ ₹12 ಸಾವಿರ ವೇತನ ನೀಡಲಾಗುತ್ತದೆ. ಇದರಿಂದ, ಜೀವನ ನಿರ್ವಹಣೆ ಕಷ್ಟವಾಗಿದೆ. ಆದ್ದರಿಂದ ಗೌರವಧನದ ಮೊತ್ತವನ್ನು ತಿಂಗಳಿಗೆ ₹25 ಸಾವಿರಕ್ಕೆ ಹೆಚ್ಚಿಸಬೇಕು’ ಎಂದು ಒತ್ತಾಯಿಸಿದರು.</p>.<p>‘ನೇಮಕಾತಿ ಸಂದರ್ಭದಲ್ಲಿ 5 ಕೃಪಾಂಕಗಳನ್ನು ನೀಡಬೇಕು. ಸುಪ್ರೀಂ ಕೋರ್ಟ್ನ ಆದೇಶದಂತೆ ಈ ವರ್ಷದಿಂದ ಸಮಾನ ಕೆಲಸಕ್ಕೆ ಸಮಾನ ವೇತನ ಜಾರಿಗೊಳಿಸಬೇಕು. ಅತಿಥಿ ಶಿಕ್ಷಕರ ಸೇವೆಯನ್ನು ಕಾಯಂಗೊಳಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>