ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ,‘ ರಾಜ್ಯದಲ್ಲಿ ಪದವೀಧರ ಶಿಕ್ಷಕರನ್ನು ಪ್ರಾಥಮಿಕ ಹಂತದಲ್ಲಿ ನೇಮಕ ಮಾಡಲಾಗುತ್ತಿದೆ. ದೇಶದಲ್ಲಿ ಜಾರಿಯಲ್ಲಿರುವ ಮೂರು ವಿಧದ ಶಿಕ್ಷಣ ನಿಯಮಗಳ ಪ್ರಕಾರ ಶಿಕ್ಷಕರ ನೇಮಕಾತಿ, ಮುಂಬಡ್ತಿ ಪ್ರಕ್ರಿಯೆಅರ್ಹತೆಗೆ ಅನುಗುಣವಾಗಿ ನಡೆಯಬೇಕು. ಶಿಕ್ಷಕರ ನೇಮಕಾತಿ ಹಾಗೂ ಮುಂಬಡ್ತಿ ಪ್ರಕ್ರಿಯೆ ಕಾನೂನುಬದ್ಧವಾಗಿಲ್ಲ. ಹೀಗಾಗಿ, ಬಡ್ತಿ ವೇಳೆಯೇ ಶೇ 75ರಷ್ಟು ಶಿಕ್ಷಕರಿಗೆ ಮುಂಬಡ್ತಿ ನೀಡಬೇಕು. ಉಳಿದ ಶೇ 25 ಭಾಗ ನೇಮಕ ಮಾಡಿಕೊಳ್ಳಬೇಕು’ ಎಂದರು.