<p><strong>ಪೀಣ್ಯ ದಾಸರಹಳ್ಳಿ:</strong> 'ಮಕ್ಕಳಿಗೆ ಶಿಸ್ತು, ಜ್ಞಾನ, ಸಂಸ್ಕಾರ, ಸಂಸ್ಕೃತಿ ಮತ್ತು ವಿದ್ಯೆ ಕಲಿಸಿ ಒಳ್ಳೆಯ ಪ್ರಜೆಗಳನ್ನಾಗಿ ಮಾಡುವ ಶಿಕ್ಷಕರ ಕಾರ್ಯ ಶ್ಲಾಘನೀಯ' ಎಂದು ಶಾಸಕ ಎಸ್. ಮುನಿರಾಜು ತಿಳಿಸಿದರು.</p>.<p>ಮಲ್ಲಸಂದ್ರದ ಕುವೆಂಪು ಪದವಿಪೂರ್ವ ಕಾಲೇಜಿನಲ್ಲಿ ಲಕ್ಷ್ಯ ಕಾಲೇಜಿನ ಸಹಯೋಗದೊಂದಿಗೆ ನಡೆದ ಗುರುವಂದನೆ ಸಮಾರಂಭದಲ್ಲಿ ಶಿಕ್ಷಕರನ್ನು ಅಭಿನಂದಿಸಿ ಅವರು ಮಾತನಾಡಿದರು.</p>.<p>‘ಶಾಲೆಗಳಲ್ಲಿ ಬಡ ಮಕ್ಕಳು ತಮ್ಮ ಪ್ರತಿಭೆ ಮತ್ತು ಶಿಕ್ಷಕರ ಪ್ರೋತ್ಸಾಹದಿಂದ ಹೆಚ್ಚು ಅಂಕ ಪಡೆದು ರಾಜ್ಯಕ್ಕೆ ಮಾದರಿಯಾಗುತ್ತಿದ್ದಾರೆ. ಅಂತಹವರನ್ನು ತಿದ್ದಿ ವಿದ್ಯೆ ಕಲಿಸಿದ ಗುರುಗಳನ್ನು ಮರೆಯಬಾರದು. ಮಕ್ಕಳಲ್ಲಿನ ಅಂಧಕಾರ ಹೋಗಲಾಡಿಸಿ ಬದುಕಿಗೆ ಬೆಳಕು ನೀಡುವ ಗುರುಗಳು ದೇವರಿಗೆ ಸಮಾನ' ಎಂದು ತಿಳಿಸಿದರು.</p>.<p>ಲಕ್ಷ್ಯ ಕಾಲೇಜಿನ ಅಧ್ಯಕ್ಷ ಧರ್ಮರಾಜ್, ಶ್ರೀಧರ್, ಕುವೆಂಪು ಕಾಲೇಜಿನ ಟಿ.ಎಸ್. ಗಂಗರಾಜು, ಭರತ್ ಗುಂಡಪ್ಪ, ಗಂಡಸಿ ಸದಾಶಿವ, ಪ್ರಾಂಶುಪಾಲ ಕೃಷ್ಣಮೂರ್ತಿ, ಕುಮಾರ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪೀಣ್ಯ ದಾಸರಹಳ್ಳಿ:</strong> 'ಮಕ್ಕಳಿಗೆ ಶಿಸ್ತು, ಜ್ಞಾನ, ಸಂಸ್ಕಾರ, ಸಂಸ್ಕೃತಿ ಮತ್ತು ವಿದ್ಯೆ ಕಲಿಸಿ ಒಳ್ಳೆಯ ಪ್ರಜೆಗಳನ್ನಾಗಿ ಮಾಡುವ ಶಿಕ್ಷಕರ ಕಾರ್ಯ ಶ್ಲಾಘನೀಯ' ಎಂದು ಶಾಸಕ ಎಸ್. ಮುನಿರಾಜು ತಿಳಿಸಿದರು.</p>.<p>ಮಲ್ಲಸಂದ್ರದ ಕುವೆಂಪು ಪದವಿಪೂರ್ವ ಕಾಲೇಜಿನಲ್ಲಿ ಲಕ್ಷ್ಯ ಕಾಲೇಜಿನ ಸಹಯೋಗದೊಂದಿಗೆ ನಡೆದ ಗುರುವಂದನೆ ಸಮಾರಂಭದಲ್ಲಿ ಶಿಕ್ಷಕರನ್ನು ಅಭಿನಂದಿಸಿ ಅವರು ಮಾತನಾಡಿದರು.</p>.<p>‘ಶಾಲೆಗಳಲ್ಲಿ ಬಡ ಮಕ್ಕಳು ತಮ್ಮ ಪ್ರತಿಭೆ ಮತ್ತು ಶಿಕ್ಷಕರ ಪ್ರೋತ್ಸಾಹದಿಂದ ಹೆಚ್ಚು ಅಂಕ ಪಡೆದು ರಾಜ್ಯಕ್ಕೆ ಮಾದರಿಯಾಗುತ್ತಿದ್ದಾರೆ. ಅಂತಹವರನ್ನು ತಿದ್ದಿ ವಿದ್ಯೆ ಕಲಿಸಿದ ಗುರುಗಳನ್ನು ಮರೆಯಬಾರದು. ಮಕ್ಕಳಲ್ಲಿನ ಅಂಧಕಾರ ಹೋಗಲಾಡಿಸಿ ಬದುಕಿಗೆ ಬೆಳಕು ನೀಡುವ ಗುರುಗಳು ದೇವರಿಗೆ ಸಮಾನ' ಎಂದು ತಿಳಿಸಿದರು.</p>.<p>ಲಕ್ಷ್ಯ ಕಾಲೇಜಿನ ಅಧ್ಯಕ್ಷ ಧರ್ಮರಾಜ್, ಶ್ರೀಧರ್, ಕುವೆಂಪು ಕಾಲೇಜಿನ ಟಿ.ಎಸ್. ಗಂಗರಾಜು, ಭರತ್ ಗುಂಡಪ್ಪ, ಗಂಡಸಿ ಸದಾಶಿವ, ಪ್ರಾಂಶುಪಾಲ ಕೃಷ್ಣಮೂರ್ತಿ, ಕುಮಾರ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>