ಮಧ್ಯಪ್ರದೇಶದಿಂದ ನಗರಕ್ಕೆ ವಲಸೆ ಬಂದಿದ್ದ ಕುಟುಂಬಗಳು ಜೀವನೋಪಾಯಕ್ಕಾಗಿ ಸಿಗ್ನಲ್ಗಳಲ್ಲಿ ಬಲೂನ್ ಮಾರಾಟ ಮಾಡುತ್ತಿದ್ದವು. ವಿಜಯನಗರದ ಟೋಲ್ಗೇಟ್ ಬಳಿಯ ರಸ್ತೆಬದಿಯಲ್ಲಿ ಇವರು ವಾಸ್ತವ್ಯ ಹೂಡಿದ್ದರು. ಇವರ ಮಕ್ಕಳೆಲ್ಲ ಶಾಲೆಯ ಮುಖಗಳನ್ನು ಕಾಣದೆ, ಬೀದಿಗಳಲ್ಲಿ ನಿಂತು ಭಿಕ್ಷಾಟನೆ ಮಾಡುತ್ತಿದ್ದರು. ಈ ಮಕ್ಕಳ ಬಗ್ಗೆ ಕಾಳಜಿ ವಹಿಸಿ ಶಾಲೆಗೆ ಸೇರಿಸಿದವರು ಕ್ಷೇತ್ರ ಶಿಕ್ಷಣಾಧಿಕಾರಿಯಾಗಿದ್ದ (ಬಿಇಒ) ನಾಗರತ್ನ.