<p><strong>ಬೆಂಗಳೂರು:</strong> ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಇದೇ 23ರಿಂದ 25ರವರೆಗೆ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ‘ಸೃಷ್ಟಿ’ ತಾಂತ್ರಿಕ ಮೇಳವನ್ನು ಆಚಾರ್ಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಹಮ್ಮಿಕೊಂಡಿದೆ. </p>.<p>ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಬಿವಿಪಿ ಕರ್ನಾಟಕ ದಕ್ಷಿಣ ಪ್ರಾಂತದ ಸವಿಷ್ಕಾರ ಸಂಚಾಲಕಿ ಸೃಷ್ಟಿ, ‘ಐಟಿ–ಬಿಟಿ ಕ್ಷೇತ್ರಕ್ಕೆ ಕೊಡುಗೆಯಾಗಿ ಈ ಸಮಾವೇಶ ಏರ್ಪಡಿಸಲಾಗಿದೆ. ರಾಜ್ಯದ 230 ಎಂಜಿನಿಯರಿಂಗ್ ಕಾಲೇಜುಗಳ ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದು, ಸುಮಾರು 500ಕ್ಕೂ ಅಧಿಕ ಯೋಜನಾ ಮಾದರಿಗಳು ಸ್ಪರ್ಧೆಯಲ್ಲಿ ಪ್ರದರ್ಶನ ಕಾಣಲಿವೆ. 3 ಸಾವಿರ ವಿದ್ಯಾರ್ಥಿ ಪ್ರತಿನಿಧಿಗಳು, 300 ಅಧ್ಯಾಪಕರು ಹಾಗೂ 100ಕ್ಕೂ ಅಧಿಕ ವಿಜ್ಞಾನಿಗಳು ಭಾಗವಹಿಸುತ್ತಾರೆ. ಮೂರು ದಿನಗಳ ಈ ಮೇಳಕ್ಕೆ ಒಟ್ಟು 50 ಸಾವಿರ ಜನರು ಭೇಟಿ ನೀಡುವ ನಿರೀಕ್ಷೆಯಿದೆ’ ಎಂದು ತಿಳಿಸಿದರು.</p>.<p>‘ವಿವಿಧ ವಿಭಾಗಗಳಲ್ಲಿ ಸ್ಪರ್ಧೆಯ ವಿಜೇತರಿಗೆ ಒಟ್ಟು ₹ 25 ಲಕ್ಷ ನಗದು ಬಹುಮಾನ ಕೊಡಲಾಗುವುದು. ಅತಿ ಹೆಚ್ಚು ಪ್ರಾಜೆಕ್ಟ್ಗಳಲ್ಲಿ ಗೆಲ್ಲುವ ಕಾಲೇಜಿಗೆ ‘ಸೃಷ್ಟಿ 2025 ಚಾಂಪಿಯನ್ ಟ್ರೋಫಿ’ ನೀಡಲಾಗುತ್ತದೆ. ವಿದ್ಯಾರ್ಥಿ ಸ್ನೇಹಿ ಕಾಲೇಜಿಗೆ ಪ್ರತ್ಯೇಕ ವಿಶೇಷ ಬಹುಮಾನ ನೀಡಲಾಗುತ್ತದೆ. ಈ ಮೇಳದಲ್ಲಿ ವಿವಿಧ ಕಾರ್ಯಕ್ರಮಗಳು ನಡೆಯಲಿವೆ’ ಎಂದು ವಿವರಿಸಿದರು.</p>.<p>‘ಮೇ 23 ರಂದು ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿಯ (ಎಐಸಿಟಿಇ) ಉಪಾಧ್ಯಕ್ಷ ಅಭಯ್ ಜೆರೆ ಪಾಲ್ಗೊಳ್ಳುತ್ತಾರೆ. ಸಮಾರೋಪ ಸಮಾರಂಭದಲ್ಲಿ ಎಐಸಿಟಿಇ ಅಧ್ಯಕ್ಷ ಪ್ರೊ. ಅನಿಲ್ ಸಹಸ್ರಬುದ್ಧೆ ಭಾಗವಹಿಸುತ್ತಾರೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಇದೇ 23ರಿಂದ 25ರವರೆಗೆ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ‘ಸೃಷ್ಟಿ’ ತಾಂತ್ರಿಕ ಮೇಳವನ್ನು ಆಚಾರ್ಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಹಮ್ಮಿಕೊಂಡಿದೆ. </p>.<p>ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಬಿವಿಪಿ ಕರ್ನಾಟಕ ದಕ್ಷಿಣ ಪ್ರಾಂತದ ಸವಿಷ್ಕಾರ ಸಂಚಾಲಕಿ ಸೃಷ್ಟಿ, ‘ಐಟಿ–ಬಿಟಿ ಕ್ಷೇತ್ರಕ್ಕೆ ಕೊಡುಗೆಯಾಗಿ ಈ ಸಮಾವೇಶ ಏರ್ಪಡಿಸಲಾಗಿದೆ. ರಾಜ್ಯದ 230 ಎಂಜಿನಿಯರಿಂಗ್ ಕಾಲೇಜುಗಳ ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದು, ಸುಮಾರು 500ಕ್ಕೂ ಅಧಿಕ ಯೋಜನಾ ಮಾದರಿಗಳು ಸ್ಪರ್ಧೆಯಲ್ಲಿ ಪ್ರದರ್ಶನ ಕಾಣಲಿವೆ. 3 ಸಾವಿರ ವಿದ್ಯಾರ್ಥಿ ಪ್ರತಿನಿಧಿಗಳು, 300 ಅಧ್ಯಾಪಕರು ಹಾಗೂ 100ಕ್ಕೂ ಅಧಿಕ ವಿಜ್ಞಾನಿಗಳು ಭಾಗವಹಿಸುತ್ತಾರೆ. ಮೂರು ದಿನಗಳ ಈ ಮೇಳಕ್ಕೆ ಒಟ್ಟು 50 ಸಾವಿರ ಜನರು ಭೇಟಿ ನೀಡುವ ನಿರೀಕ್ಷೆಯಿದೆ’ ಎಂದು ತಿಳಿಸಿದರು.</p>.<p>‘ವಿವಿಧ ವಿಭಾಗಗಳಲ್ಲಿ ಸ್ಪರ್ಧೆಯ ವಿಜೇತರಿಗೆ ಒಟ್ಟು ₹ 25 ಲಕ್ಷ ನಗದು ಬಹುಮಾನ ಕೊಡಲಾಗುವುದು. ಅತಿ ಹೆಚ್ಚು ಪ್ರಾಜೆಕ್ಟ್ಗಳಲ್ಲಿ ಗೆಲ್ಲುವ ಕಾಲೇಜಿಗೆ ‘ಸೃಷ್ಟಿ 2025 ಚಾಂಪಿಯನ್ ಟ್ರೋಫಿ’ ನೀಡಲಾಗುತ್ತದೆ. ವಿದ್ಯಾರ್ಥಿ ಸ್ನೇಹಿ ಕಾಲೇಜಿಗೆ ಪ್ರತ್ಯೇಕ ವಿಶೇಷ ಬಹುಮಾನ ನೀಡಲಾಗುತ್ತದೆ. ಈ ಮೇಳದಲ್ಲಿ ವಿವಿಧ ಕಾರ್ಯಕ್ರಮಗಳು ನಡೆಯಲಿವೆ’ ಎಂದು ವಿವರಿಸಿದರು.</p>.<p>‘ಮೇ 23 ರಂದು ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿಯ (ಎಐಸಿಟಿಇ) ಉಪಾಧ್ಯಕ್ಷ ಅಭಯ್ ಜೆರೆ ಪಾಲ್ಗೊಳ್ಳುತ್ತಾರೆ. ಸಮಾರೋಪ ಸಮಾರಂಭದಲ್ಲಿ ಎಐಸಿಟಿಇ ಅಧ್ಯಕ್ಷ ಪ್ರೊ. ಅನಿಲ್ ಸಹಸ್ರಬುದ್ಧೆ ಭಾಗವಹಿಸುತ್ತಾರೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>