‘ವಿಶೇಷ ತನಿಖಾ ದಳದ (ಎಸ್ಐಟಿ) ಪೊಲೀಸರು ಎಲ್ಲ ಆಯಾಮಗಳಲ್ಲೂ ತೃಪ್ತಿಕರ ತನಿಖೆ ನಡೆಸಿದ್ದಾರೆ. ಆದರೆ, ಹೊರ ರಾಜ್ಯಗಳ ತನಿಖಾ ಸಂಸ್ಥೆಯೊಂದಿಗೆ ಸಮನ್ವಯದ ಕೊರತೆ ಇದೆ. ಇದರಿಂದಾಗಿ ನಿರೀಕ್ಷಿತ ಫಲಿತಾಂಶ ಸಿಕ್ಕಿಲ್ಲ. ಆದ್ದರಿಂದ ಈ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವ ಕಾರಣ ತನಿಖೆಯನ್ನು ಸಿಬಿಐ ನಡೆಸಬೇಕು‘ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.