<p><strong>ಬೆಂಗಳೂರು</strong>: ಉತ್ತರ ಪ್ರದೇಶದ ಟೆಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಮಾರತ್ಹಳ್ಳಿ ಪೊಲೀಸರು ನಡೆಸಿದ ಕಾರ್ಯಾಚರಣೆ ರೋಚಕ ಹಾಗೂ ರಹಸ್ಯವಾಗಿತ್ತು.</p>.<p>ಕರೆಯೊಂದನ್ನು ಆಧರಿಸಿ ಅತುಲ್ ಪತ್ನಿ ನಿಖಿತಾ ಸಿಂಘಾನಿಯಾ ಅವರನ್ನು ಹರಿಯಾಣದ ಗುರುಗ್ರಾಮದ ಪಿ.ಜಿಯಲ್ಲಿ ಬಂಧಿಸಿದ್ದರೆ, ಅವರ ತಾಯಿ ನಿಶಾ ಸಿಂಘಾನಿಯಾ ಹಾಗೂ ಸಹೋದರ ಅನುರಾಗ್ ಸಿಂಘಾನಿಯಾ ಅವರನ್ನು ಉತ್ತರ ಪ್ರದೇಶದ ಪ್ರಯಾಗ್ರಾಜ್ನ ರಾಮೇಶ್ವರ ಹೋಟೆಲ್ ಬಳಿ ಡಿ.14ರಂದು ಬಂಧಿಸಿದ್ದರು. </p>.<p>ಆರೋಪಿಗಳು ಪದೇ ಪದೇ ಸ್ಥಳ ಬದಲಾವಣೆ ಹಾಗೂ ವಾಟ್ಸ್ಆ್ಯಪ್ನಲ್ಲಿ ಕರೆ ಮಾಡುತ್ತಿದ್ದರು. ಇದರಿಂದ ಕಾರ್ಯಾಚರಣೆಗೆ ತೆರಳಿದ್ದ ಪೊಲೀಸರಿಗೆ ಆರೋಪಿಗಳ ಪತ್ತೆ ಹಾಗೂ ಬಂಧನ ಸವಾಲಾಗಿತ್ತು. ಕೊನೆಗೆ ಒಂದು ಕರೆಯ ಜಾಡು ಹಿಡಿದು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿ ಆಗಿದ್ದಾರೆ.</p>.<p>ಸಂಬಂಧಿಕರೊಬ್ಬರು ಜಾಮೀನು ಅರ್ಜಿ ಸಲ್ಲಿಕೆ ಸಂಬಂಧ ನಿಖಿತಾ ಹಾಗೂ ಆಕೆಯ ತಾಯಿ ನಿಶಾ ಅವರನ್ನು ಅವರ ಸಂಪರ್ಕಿಸಿದ್ದರು. ಕೂಡಲೇ ಆ ಇಬ್ಬರ ಮೊಬೈಲ್ ಕರೆಗಳ ಮೇಲೆ ಪೊಲೀಸರು ನಿಗಾ ವಹಿಸಿದ್ದರು. ತನ್ನ ಸಂಬಂಧಿಗೆ ಶುಕ್ರವಾರ ರಾತ್ರಿ ನಿಖಿತಾ ಕರೆ ಮಾಡಿ ಮಾತನಾಡಿದ್ದರು. ಈ ಕರೆ ನೀಡಿದ ಸುಳಿವು ಆಧರಿಸಿ ಕೂಡಲೇ ಕಾರ್ಯಾಚರಣೆಗೆ ಇಳಿದ ಪೊಲೀಸರು, ಮೂವರನ್ನೂ ಬಂಧಿಸಿ ನಗರಕ್ಕೆ ಕರೆ ತಂದಿದ್ದರು.</p>.<p>ಅತುಲ್ ಆತ್ಮಹತ್ಯೆ ಬಳಿಕ ಬಂಧನದ ಭೀತಿಯಿಂದ ಆರೋಪಿಗಳು ಹೊರ ರಾಜ್ಯಕ್ಕೆ ಪರಾರಿ ಆಗಿದ್ದರು. ಪದೇ ಪದೇ ಸ್ಥಳ ಬದಲಾವಣೆ ಮಾಡುತ್ತಿದ್ದರು.</p>.<p>ಮಾರತ್ಹಳ್ಳಿ ಇನ್ಸ್ಪೆಕ್ಟರ್ ಪಿ.ಎನ್.ಅನಿಲ್ ಕುಮಾರ್ ಉಸ್ತುವಾರಿಯಲ್ಲಿ ಪಿಎಸ್ಐಗಳಾದ ರಂಜಿತ್, ಚೇತನ್, ಜ್ಞಾನದೇವ ಹಾಗೂ ವಿದ್ಯಾ ಅವರ ಸಾರಥ್ಯದಲ್ಲಿ ನಾಲ್ಕು ಪ್ರತ್ಯೇಕ ತಂಡಗಳನ್ನು ರಚಿಸಲಾಗಿತ್ತು. ಹರಿಯಾಣ ಹಾಗೂ ಉತ್ತರ ಪ್ರದೇಶ ರಾಜ್ಯಗಳಲ್ಲಿ ಈ ತಂಡಗಳು ರಹಸ್ಯ ಕಾರ್ಯಾಚರಣೆ ನಡೆಸಿದ್ದವು. ಐದು ದಿನ ಕಾರ್ಯಾಚರಣೆ ನಡೆಸಿದ ಬಳಿಕ ಆರೋಪಿಗಳನ್ನು ಬಂಧಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಉತ್ತರ ಪ್ರದೇಶದ ಟೆಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಮಾರತ್ಹಳ್ಳಿ ಪೊಲೀಸರು ನಡೆಸಿದ ಕಾರ್ಯಾಚರಣೆ ರೋಚಕ ಹಾಗೂ ರಹಸ್ಯವಾಗಿತ್ತು.</p>.<p>ಕರೆಯೊಂದನ್ನು ಆಧರಿಸಿ ಅತುಲ್ ಪತ್ನಿ ನಿಖಿತಾ ಸಿಂಘಾನಿಯಾ ಅವರನ್ನು ಹರಿಯಾಣದ ಗುರುಗ್ರಾಮದ ಪಿ.ಜಿಯಲ್ಲಿ ಬಂಧಿಸಿದ್ದರೆ, ಅವರ ತಾಯಿ ನಿಶಾ ಸಿಂಘಾನಿಯಾ ಹಾಗೂ ಸಹೋದರ ಅನುರಾಗ್ ಸಿಂಘಾನಿಯಾ ಅವರನ್ನು ಉತ್ತರ ಪ್ರದೇಶದ ಪ್ರಯಾಗ್ರಾಜ್ನ ರಾಮೇಶ್ವರ ಹೋಟೆಲ್ ಬಳಿ ಡಿ.14ರಂದು ಬಂಧಿಸಿದ್ದರು. </p>.<p>ಆರೋಪಿಗಳು ಪದೇ ಪದೇ ಸ್ಥಳ ಬದಲಾವಣೆ ಹಾಗೂ ವಾಟ್ಸ್ಆ್ಯಪ್ನಲ್ಲಿ ಕರೆ ಮಾಡುತ್ತಿದ್ದರು. ಇದರಿಂದ ಕಾರ್ಯಾಚರಣೆಗೆ ತೆರಳಿದ್ದ ಪೊಲೀಸರಿಗೆ ಆರೋಪಿಗಳ ಪತ್ತೆ ಹಾಗೂ ಬಂಧನ ಸವಾಲಾಗಿತ್ತು. ಕೊನೆಗೆ ಒಂದು ಕರೆಯ ಜಾಡು ಹಿಡಿದು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿ ಆಗಿದ್ದಾರೆ.</p>.<p>ಸಂಬಂಧಿಕರೊಬ್ಬರು ಜಾಮೀನು ಅರ್ಜಿ ಸಲ್ಲಿಕೆ ಸಂಬಂಧ ನಿಖಿತಾ ಹಾಗೂ ಆಕೆಯ ತಾಯಿ ನಿಶಾ ಅವರನ್ನು ಅವರ ಸಂಪರ್ಕಿಸಿದ್ದರು. ಕೂಡಲೇ ಆ ಇಬ್ಬರ ಮೊಬೈಲ್ ಕರೆಗಳ ಮೇಲೆ ಪೊಲೀಸರು ನಿಗಾ ವಹಿಸಿದ್ದರು. ತನ್ನ ಸಂಬಂಧಿಗೆ ಶುಕ್ರವಾರ ರಾತ್ರಿ ನಿಖಿತಾ ಕರೆ ಮಾಡಿ ಮಾತನಾಡಿದ್ದರು. ಈ ಕರೆ ನೀಡಿದ ಸುಳಿವು ಆಧರಿಸಿ ಕೂಡಲೇ ಕಾರ್ಯಾಚರಣೆಗೆ ಇಳಿದ ಪೊಲೀಸರು, ಮೂವರನ್ನೂ ಬಂಧಿಸಿ ನಗರಕ್ಕೆ ಕರೆ ತಂದಿದ್ದರು.</p>.<p>ಅತುಲ್ ಆತ್ಮಹತ್ಯೆ ಬಳಿಕ ಬಂಧನದ ಭೀತಿಯಿಂದ ಆರೋಪಿಗಳು ಹೊರ ರಾಜ್ಯಕ್ಕೆ ಪರಾರಿ ಆಗಿದ್ದರು. ಪದೇ ಪದೇ ಸ್ಥಳ ಬದಲಾವಣೆ ಮಾಡುತ್ತಿದ್ದರು.</p>.<p>ಮಾರತ್ಹಳ್ಳಿ ಇನ್ಸ್ಪೆಕ್ಟರ್ ಪಿ.ಎನ್.ಅನಿಲ್ ಕುಮಾರ್ ಉಸ್ತುವಾರಿಯಲ್ಲಿ ಪಿಎಸ್ಐಗಳಾದ ರಂಜಿತ್, ಚೇತನ್, ಜ್ಞಾನದೇವ ಹಾಗೂ ವಿದ್ಯಾ ಅವರ ಸಾರಥ್ಯದಲ್ಲಿ ನಾಲ್ಕು ಪ್ರತ್ಯೇಕ ತಂಡಗಳನ್ನು ರಚಿಸಲಾಗಿತ್ತು. ಹರಿಯಾಣ ಹಾಗೂ ಉತ್ತರ ಪ್ರದೇಶ ರಾಜ್ಯಗಳಲ್ಲಿ ಈ ತಂಡಗಳು ರಹಸ್ಯ ಕಾರ್ಯಾಚರಣೆ ನಡೆಸಿದ್ದವು. ಐದು ದಿನ ಕಾರ್ಯಾಚರಣೆ ನಡೆಸಿದ ಬಳಿಕ ಆರೋಪಿಗಳನ್ನು ಬಂಧಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>