<p><strong>ಜೋನಪುರ(ಉತ್ತರ ಪ್ರದೇಶ):</strong> ಟೆಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಾರಿಯಾಗಿರುವ ಅವರ ಪತ್ನಿ ನಿಖಿತಾ ಸಿಂಘಾನಿಯಾಗೆ ಸಮನ್ಸ್ ಜಾರಿ ಮಾಡಿರುವ ಬೆಂಗಳೂರು ಪೊಲೀಸರು, ಮೂರು ದಿನಗಳೊಳಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.</p><p>ಬೆಳಿಗ್ಗೆ 11ರ ಸುಮಾರಿಗೆ ಉತ್ತರ ಪ್ರದೇಶದ ಜೋನಪುರದ ಖೋವಾ ಮಂಡಿ ಪ್ರದೇಶದಲ್ಲಿರುವ ನಿಖಿತಾ ನಿವಾಸದ ಬಳಿಗೆ ಆಗಮಿಸಿದ ಇನ್ಸ್ಪೆಕ್ಟರ್ ಸಂಜೀತ್ ಕುಮಾರ್ ನೇತೃತ್ವದ 4 ಸದಸ್ಯರ ಬೆಂಗಳೂರು ಪೊಲೀಸರ ತಂಡ ನಿಖಿತಾ ನಿವಾಸಕ್ಕೆ ಸಮನ್ಸ್ ಅಂಟಿಸಿದೆ.</p> <p>‘ಆಕೆಯ ಪತಿ ಟಿಕಿ ಅತುಲ್ ಆತ್ಮಹತ್ಯೆಯ ಸಾಂದರ್ಭಿಕ ಸಾಕ್ಷ್ಯಾಧಾರಗಳ ಹಿನ್ನೆಲೆ ನಿಖಿತಾ ಬೆಂಗಳೂರಿನ ಮಾರತ್ ಹಳ್ಳಿ ಪೊಲೀಸ್ ಠಾಣೆಯ ತನಿಖಾಧಿಕಾರಿ ಮುಂದೆ ಮೂರು ದಿನಗಳ ಒಳಗೆ ವಿಚಾರಣೆಗೆ ಹಾಜರಾಗಬೇಕು’ಎಂದು ಸರ್ಕಲ್ ಇನ್ಸ್ಪೆಕ್ಟರ್ ಆಯುಶ್ ಶ್ರೀವಾಸ್ತವ ತಿಳಿಸಿದ್ದಾರೆ.</p><p>ಎಫ್ಐಆರ್ನಲ್ಲಿ ನಿಖಿತಾ ಕುಟುಂಬ ಸದಸ್ಯರಾದ ತಾಯಿ ನಿಶಾ ನಿಂಘಾನಿಯಾ, ಚಿಕ್ಕಪ್ಪ ಸುಶಿಲ್ ಸಿಂಘಾನಿಯಾ, ಸಹೋದರ ಅನುರಾಗ್ ಸಿಂಘಾನಿಯಾ ಹೆಸರುಗಳಿದ್ದರೂ ನಿಕಿತಾಗೆ ಮಾತ್ರ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ನೋಟಿಸ್ ನೀಡಲಾಗಿದೆ. ಸಮನ್ಸ್ನಲ್ಲಿ ಮನೆಯ ಇತರೆ ಸದಸ್ಯರ ಹೆಸರುಗಳಿಲ್ಲ.</p><p>ಸಮನ್ಸ್ ಮನೆಯ ಗೋಡೆಗೆ ಅಂಟಿಸುವ ವೇಳೆ ಮನೆಯಲ್ಲಿ ಯಾವೊಬ್ಬ ಸದಸ್ಯರೂ ಇರಲಿಲ್ಲ ಎಂದು ವರದಿ ತಿಳಿಸಿದೆ.</p><p>ಗುರುವಾರ ತಡರಾತ್ರಿ ಜೋನಪುರಕ್ಕೆ ಆಗಮಿಸಿದ ಬೆಂಗಳೂರು ಪೊಲೀಸರ ತಂಡ ಎಸ್ಪಿ ಅಜಯ್ ಪಾಲ್ ಶರ್ಮಾ ಅವರ ಜೊತೆ ಮಾತುಕತೆ ನಡೆಸಿ ಬಳಿಕ ಮನೆಗೆ ಸಮನ್ಸ್ ಅಂಟಿಸಿದ್ದಾರೆ.</p> <p>ನಿಖಿತಾ ವಿರುದ್ಧ ಈ ಹಿಂದೆ ಯಾವುದಾದರೂ ಪ್ರಕರಣ ದಾಖಲಾಗಿಯೇ ಎಂಬ ಮಾಹಿತಿ ಕಲೆಹಾಕಲು ಪೊಲೀಸರು ಸಿಟಿ ಸಿವಿಲ್ ನ್ಯಾಯಾಯಕ್ಕೆ ಹೋಗುವ ಯೋಜನೆಯಲ್ಲಿದ್ದಾರೆ.</p><p>34 ವರ್ಷದ ಟೆಕ್ಕಿ ಅತುಲ್ ಸುಭಾಷ್ ಡಿಸೆಂಬರ್ 9ರಂದು ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಮಾಜಿ ಪತ್ನಿ ಮತ್ತು ಅವರ ಕುಟುಂಬದ ಕಿರುಕುಳದಿಂದ ಬೇಸತ್ತು ಅತುಲ್ ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಕೇಳಿಬಂದಿತ್ತು.</p><p><strong>ಜೋನಪುರ(ಉತ್ತರ ಪ್ರದೇಶ):</strong> ಟೆಕಿ ಅತುಲ್ ಸುಭಾಶ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಾರಿಯಾಗಿರುವ ಅವರ ಪತ್ನಿ ನಿಕಿತಾ ಸಿಂಘಾನಿಯಾಗೆ ಸಮನ್ಸ್ ಜಾರಿ ಮಾಡಿರುವ ಬೆಂಗಳೂರು ಪೊಲೀಸರು, ಮೂರು ದಿನಗಳೊಳಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.</p><p>ಬೆಳಿಗ್ಗೆ 11ರ ಸುಮಾರಿಗೆ ಉತ್ತರ ಪ್ರದೇಶದ ಜೋನಪುರದ ಖೋವಾ ಮಂಡಿ ಪ್ರದೇಶದಲ್ಲಿರುವ ನಿಕಿತಾ ನಿವಾಸದ ಬಳಿಗೆ ಆಗಮಿಸಿದ ಇನ್ಸ್ಪೆಕ್ಟರ್ ಸಂಜೀತ್ ಕುಮಾರ್ ನೇತೃತ್ವದ 4 ಸದಸ್ಯರ ಬೆಂಗಳೂರು ಪೊಲೀಸರ ತಂಡ ನಿಕಿತಾ ನಿವಾಸಕ್ಕೆ ಸಮನ್ಸ್ ಅಂಟಿಸಿದೆ.</p> <p>‘ಆಕೆಯ ಪತಿ ಟಿಕಿ ಅತುಲ್ ಆತ್ಮಹತ್ಯೆಯ ಸಾಂದರ್ಭಿಕ ಸಾಕ್ಷ್ಯಾಧಾರಗಳ ಹಿನ್ನೆಲೆ ನಿಖಿತಾ ಬೆಂಗಳೂರಿನ ಮಾರತ್ ಹಳ್ಳಿ ಪೊಲೀಸ್ ಠಾಣೆಯ ತನಿಖಾಧಿಕಾರಿ ಮುಂದೆ ಮೂರು ದಿನಗಳ ಒಳಗೆ ವಿಚಾರಣೆಗೆ ಹಾಜರಾಗಬೇಕು’ಎಂದು ಸರ್ಕಲ್ ಇನ್ಸ್ಪೆಕ್ಟರ್ ಆಯುಶ್ ಶ್ರೀವಾಸ್ತವ ತಿಳಿಸಿದ್ದಾರೆ.</p><p>ಎಫ್ಐಆರ್ನಲ್ಲಿ ನಿಕಿತಾ ಕುಟುಂಬ ಸದಸ್ಯರಾದ ತಾಯಿ ನಿಶಾ ನಿಂಘಾನಿಯಾ, ಚಿಕ್ಕಪ್ಪ ಸುಶಿಲ್ ಸಿಂಘಾನಿಯಾ, ಸಹೋದರ ಅನುರಾಗ್ ಸಿಂಘಾನಿಯಾ ಹೆಸರುಗಳಿದ್ದರೂ ನಿಕಿತಾಗೆ ಮಾತ್ರ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ನೋಟಿಸ್ ನೀಡಲಾಗಿದೆ. ಸಮನ್ಸ್ನಲ್ಲಿ ಮನೆಯ ಇತರೆ ಸದಸ್ಯರ ಹೆಸರುಗಳಿಲ್ಲ.</p><p>ಸಮನ್ಸ್ ಮನೆಯ ಗೋಡೆಗೆ ಅಂಟಿಸುವ ವೇಳೆ ಮನೆಯಲ್ಲಿ ಯಾವೊಬ್ಬ ಸದಸ್ಯರೂ ಇರಲಿಲ್ಲ ಎಂದು ವರದಿ ತಿಳಿಸಿದೆ.</p><p>ಗುರುವಾರ ತಡರಾತ್ರಿ ಜೋನಪುರಕ್ಕೆ ಆಗಮಿಸಿದ ಬೆಂಗಳೂರು ಪೊಲೀಸರ ತಂಡ ಎಸ್ಪಿ ಅಜಯ್ ಪಾಲ್ ಶರ್ಮಾ ಅವರ ಜೊತೆ ಮಾತುಕತೆ ನಡೆಸಿ ಬಳಿಕ ಮನೆಗೆ ಸಮನ್ಸ್ ಅಂಟಿಸಿದ್ದಾರೆ.</p> <p>ನಿಕಿತಾ ವಿರುದ್ಧ ಈ ಹಿಂದೆ ಯಾವುದಾದರೂ ಪ್ರಕರಣ ದಾಖಲಾಗಿಯೇ ಎಂಬ ಮಾಹಿತಿ ಕಲೆಹಾಕಲು ಪೊಲೀಸರು ಸಿಟಿ ಸಿವಿಲ್ ನ್ಯಾಯಾಯಕ್ಕೆ ಹೋಗುವ ಯೋಜನೆಯಲ್ಲಿದ್ದಾರೆ.</p><p>34 ವರ್ಷದ ಟೆಕ್ಕಿ ಅತುಲ್ ಸುಭಾಶ್ ಡಿಸೆಂಬರ್ 9ರಂದು ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಮಾಜಿ ಪತ್ನಿ ಮತ್ತು ಅವರ ಕುಟುಂಬದ ಕಿರುಕುಳದಿಂದ ಬೇಸತ್ತು ಅತುಲ್ ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಕೇಳಿಬಂದಿತ್ತು.</p> .ಬೆಂಗಳೂರಿನ ಟೆಕಿ ಆತ್ಮಹತ್ಯೆ: ಉತ್ತರ ಪ್ರದೇಶದಲ್ಲಿ ಅತ್ತೆ, ಬಾಮೈದ ನಾಪತ್ತೆ.ಬಂಧನ ಭೀತಿ: ಆತ್ಮಹತ್ಯೆ ಮಾಡಿಕೊಂಡ ಟೆಕಿ ಅತುಲ್ ಪತ್ನಿ ಪರಾರಿ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೋನಪುರ(ಉತ್ತರ ಪ್ರದೇಶ):</strong> ಟೆಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಾರಿಯಾಗಿರುವ ಅವರ ಪತ್ನಿ ನಿಖಿತಾ ಸಿಂಘಾನಿಯಾಗೆ ಸಮನ್ಸ್ ಜಾರಿ ಮಾಡಿರುವ ಬೆಂಗಳೂರು ಪೊಲೀಸರು, ಮೂರು ದಿನಗಳೊಳಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.</p><p>ಬೆಳಿಗ್ಗೆ 11ರ ಸುಮಾರಿಗೆ ಉತ್ತರ ಪ್ರದೇಶದ ಜೋನಪುರದ ಖೋವಾ ಮಂಡಿ ಪ್ರದೇಶದಲ್ಲಿರುವ ನಿಖಿತಾ ನಿವಾಸದ ಬಳಿಗೆ ಆಗಮಿಸಿದ ಇನ್ಸ್ಪೆಕ್ಟರ್ ಸಂಜೀತ್ ಕುಮಾರ್ ನೇತೃತ್ವದ 4 ಸದಸ್ಯರ ಬೆಂಗಳೂರು ಪೊಲೀಸರ ತಂಡ ನಿಖಿತಾ ನಿವಾಸಕ್ಕೆ ಸಮನ್ಸ್ ಅಂಟಿಸಿದೆ.</p> <p>‘ಆಕೆಯ ಪತಿ ಟಿಕಿ ಅತುಲ್ ಆತ್ಮಹತ್ಯೆಯ ಸಾಂದರ್ಭಿಕ ಸಾಕ್ಷ್ಯಾಧಾರಗಳ ಹಿನ್ನೆಲೆ ನಿಖಿತಾ ಬೆಂಗಳೂರಿನ ಮಾರತ್ ಹಳ್ಳಿ ಪೊಲೀಸ್ ಠಾಣೆಯ ತನಿಖಾಧಿಕಾರಿ ಮುಂದೆ ಮೂರು ದಿನಗಳ ಒಳಗೆ ವಿಚಾರಣೆಗೆ ಹಾಜರಾಗಬೇಕು’ಎಂದು ಸರ್ಕಲ್ ಇನ್ಸ್ಪೆಕ್ಟರ್ ಆಯುಶ್ ಶ್ರೀವಾಸ್ತವ ತಿಳಿಸಿದ್ದಾರೆ.</p><p>ಎಫ್ಐಆರ್ನಲ್ಲಿ ನಿಖಿತಾ ಕುಟುಂಬ ಸದಸ್ಯರಾದ ತಾಯಿ ನಿಶಾ ನಿಂಘಾನಿಯಾ, ಚಿಕ್ಕಪ್ಪ ಸುಶಿಲ್ ಸಿಂಘಾನಿಯಾ, ಸಹೋದರ ಅನುರಾಗ್ ಸಿಂಘಾನಿಯಾ ಹೆಸರುಗಳಿದ್ದರೂ ನಿಕಿತಾಗೆ ಮಾತ್ರ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ನೋಟಿಸ್ ನೀಡಲಾಗಿದೆ. ಸಮನ್ಸ್ನಲ್ಲಿ ಮನೆಯ ಇತರೆ ಸದಸ್ಯರ ಹೆಸರುಗಳಿಲ್ಲ.</p><p>ಸಮನ್ಸ್ ಮನೆಯ ಗೋಡೆಗೆ ಅಂಟಿಸುವ ವೇಳೆ ಮನೆಯಲ್ಲಿ ಯಾವೊಬ್ಬ ಸದಸ್ಯರೂ ಇರಲಿಲ್ಲ ಎಂದು ವರದಿ ತಿಳಿಸಿದೆ.</p><p>ಗುರುವಾರ ತಡರಾತ್ರಿ ಜೋನಪುರಕ್ಕೆ ಆಗಮಿಸಿದ ಬೆಂಗಳೂರು ಪೊಲೀಸರ ತಂಡ ಎಸ್ಪಿ ಅಜಯ್ ಪಾಲ್ ಶರ್ಮಾ ಅವರ ಜೊತೆ ಮಾತುಕತೆ ನಡೆಸಿ ಬಳಿಕ ಮನೆಗೆ ಸಮನ್ಸ್ ಅಂಟಿಸಿದ್ದಾರೆ.</p> <p>ನಿಖಿತಾ ವಿರುದ್ಧ ಈ ಹಿಂದೆ ಯಾವುದಾದರೂ ಪ್ರಕರಣ ದಾಖಲಾಗಿಯೇ ಎಂಬ ಮಾಹಿತಿ ಕಲೆಹಾಕಲು ಪೊಲೀಸರು ಸಿಟಿ ಸಿವಿಲ್ ನ್ಯಾಯಾಯಕ್ಕೆ ಹೋಗುವ ಯೋಜನೆಯಲ್ಲಿದ್ದಾರೆ.</p><p>34 ವರ್ಷದ ಟೆಕ್ಕಿ ಅತುಲ್ ಸುಭಾಷ್ ಡಿಸೆಂಬರ್ 9ರಂದು ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಮಾಜಿ ಪತ್ನಿ ಮತ್ತು ಅವರ ಕುಟುಂಬದ ಕಿರುಕುಳದಿಂದ ಬೇಸತ್ತು ಅತುಲ್ ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಕೇಳಿಬಂದಿತ್ತು.</p><p><strong>ಜೋನಪುರ(ಉತ್ತರ ಪ್ರದೇಶ):</strong> ಟೆಕಿ ಅತುಲ್ ಸುಭಾಶ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಾರಿಯಾಗಿರುವ ಅವರ ಪತ್ನಿ ನಿಕಿತಾ ಸಿಂಘಾನಿಯಾಗೆ ಸಮನ್ಸ್ ಜಾರಿ ಮಾಡಿರುವ ಬೆಂಗಳೂರು ಪೊಲೀಸರು, ಮೂರು ದಿನಗಳೊಳಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.</p><p>ಬೆಳಿಗ್ಗೆ 11ರ ಸುಮಾರಿಗೆ ಉತ್ತರ ಪ್ರದೇಶದ ಜೋನಪುರದ ಖೋವಾ ಮಂಡಿ ಪ್ರದೇಶದಲ್ಲಿರುವ ನಿಕಿತಾ ನಿವಾಸದ ಬಳಿಗೆ ಆಗಮಿಸಿದ ಇನ್ಸ್ಪೆಕ್ಟರ್ ಸಂಜೀತ್ ಕುಮಾರ್ ನೇತೃತ್ವದ 4 ಸದಸ್ಯರ ಬೆಂಗಳೂರು ಪೊಲೀಸರ ತಂಡ ನಿಕಿತಾ ನಿವಾಸಕ್ಕೆ ಸಮನ್ಸ್ ಅಂಟಿಸಿದೆ.</p> <p>‘ಆಕೆಯ ಪತಿ ಟಿಕಿ ಅತುಲ್ ಆತ್ಮಹತ್ಯೆಯ ಸಾಂದರ್ಭಿಕ ಸಾಕ್ಷ್ಯಾಧಾರಗಳ ಹಿನ್ನೆಲೆ ನಿಖಿತಾ ಬೆಂಗಳೂರಿನ ಮಾರತ್ ಹಳ್ಳಿ ಪೊಲೀಸ್ ಠಾಣೆಯ ತನಿಖಾಧಿಕಾರಿ ಮುಂದೆ ಮೂರು ದಿನಗಳ ಒಳಗೆ ವಿಚಾರಣೆಗೆ ಹಾಜರಾಗಬೇಕು’ಎಂದು ಸರ್ಕಲ್ ಇನ್ಸ್ಪೆಕ್ಟರ್ ಆಯುಶ್ ಶ್ರೀವಾಸ್ತವ ತಿಳಿಸಿದ್ದಾರೆ.</p><p>ಎಫ್ಐಆರ್ನಲ್ಲಿ ನಿಕಿತಾ ಕುಟುಂಬ ಸದಸ್ಯರಾದ ತಾಯಿ ನಿಶಾ ನಿಂಘಾನಿಯಾ, ಚಿಕ್ಕಪ್ಪ ಸುಶಿಲ್ ಸಿಂಘಾನಿಯಾ, ಸಹೋದರ ಅನುರಾಗ್ ಸಿಂಘಾನಿಯಾ ಹೆಸರುಗಳಿದ್ದರೂ ನಿಕಿತಾಗೆ ಮಾತ್ರ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ನೋಟಿಸ್ ನೀಡಲಾಗಿದೆ. ಸಮನ್ಸ್ನಲ್ಲಿ ಮನೆಯ ಇತರೆ ಸದಸ್ಯರ ಹೆಸರುಗಳಿಲ್ಲ.</p><p>ಸಮನ್ಸ್ ಮನೆಯ ಗೋಡೆಗೆ ಅಂಟಿಸುವ ವೇಳೆ ಮನೆಯಲ್ಲಿ ಯಾವೊಬ್ಬ ಸದಸ್ಯರೂ ಇರಲಿಲ್ಲ ಎಂದು ವರದಿ ತಿಳಿಸಿದೆ.</p><p>ಗುರುವಾರ ತಡರಾತ್ರಿ ಜೋನಪುರಕ್ಕೆ ಆಗಮಿಸಿದ ಬೆಂಗಳೂರು ಪೊಲೀಸರ ತಂಡ ಎಸ್ಪಿ ಅಜಯ್ ಪಾಲ್ ಶರ್ಮಾ ಅವರ ಜೊತೆ ಮಾತುಕತೆ ನಡೆಸಿ ಬಳಿಕ ಮನೆಗೆ ಸಮನ್ಸ್ ಅಂಟಿಸಿದ್ದಾರೆ.</p> <p>ನಿಕಿತಾ ವಿರುದ್ಧ ಈ ಹಿಂದೆ ಯಾವುದಾದರೂ ಪ್ರಕರಣ ದಾಖಲಾಗಿಯೇ ಎಂಬ ಮಾಹಿತಿ ಕಲೆಹಾಕಲು ಪೊಲೀಸರು ಸಿಟಿ ಸಿವಿಲ್ ನ್ಯಾಯಾಯಕ್ಕೆ ಹೋಗುವ ಯೋಜನೆಯಲ್ಲಿದ್ದಾರೆ.</p><p>34 ವರ್ಷದ ಟೆಕ್ಕಿ ಅತುಲ್ ಸುಭಾಶ್ ಡಿಸೆಂಬರ್ 9ರಂದು ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಮಾಜಿ ಪತ್ನಿ ಮತ್ತು ಅವರ ಕುಟುಂಬದ ಕಿರುಕುಳದಿಂದ ಬೇಸತ್ತು ಅತುಲ್ ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಕೇಳಿಬಂದಿತ್ತು.</p> .ಬೆಂಗಳೂರಿನ ಟೆಕಿ ಆತ್ಮಹತ್ಯೆ: ಉತ್ತರ ಪ್ರದೇಶದಲ್ಲಿ ಅತ್ತೆ, ಬಾಮೈದ ನಾಪತ್ತೆ.ಬಂಧನ ಭೀತಿ: ಆತ್ಮಹತ್ಯೆ ಮಾಡಿಕೊಂಡ ಟೆಕಿ ಅತುಲ್ ಪತ್ನಿ ಪರಾರಿ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>