ಕೇಂದ್ರ ಕೌಶಲ ಅಭಿವೃದ್ಧಿ ಸಚಿವಾಲಯದ ಕಾರ್ಯದರ್ಶಿ ಪ್ರವೀಣ್ ಕುಮಾರ್, ‘ಪೈಪೋಟಿಯ ಯುಗದಲ್ಲಿ ಯುವ ಸಂಪನ್ಮೂಲ ಕೌಶಲಪೂರ್ಣವಾಗಿದ್ದಲ್ಲಿ ಮಾತ್ರವೇ ದೇಶದ ಅಭಿವೃದ್ಧಿ ಸಾಧ್ಯ. ಕೌಶಲ ಅಭಿವೃದ್ಧಿ ಯೋಜನೆಯನ್ನು ತಳಮಟ್ಟಕ್ಕೆ ಕೊಂಡೊಯ್ಯಲು ಮಹಾತ್ಮಗಾಂಧಿ ರಾಷ್ಟ್ರೀಯ ಫೆಲೋಷಿಪ್ ನೀಡುವ ಮೂಲಕ ಜಿಲ್ಲಾ ಕೌಶಲ ಯೋಜನೆ ರೂಪಿಸಲು ಉದ್ದೇಶಿಸಲಾಗಿದೆ’ ಎಂದರು. ಕೇಂದ್ರ ಕೌಶಲ ಅಭಿವೃದ್ಧಿ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಜ್ಯೋತಿಕಾ ಪಟಾಣ್ಕರ್, ‘ಕರ್ನಾಟಕದ 16 ಜಿಲ್ಲೆಗಳು ಸೇರಿದಂತೆ ದೇಶದ 6 ರಾಜ್ಯಗಳ 75 ಜಿಲ್ಲೆಗಳಲ್ಲಿ ಈ ಯೋಜನೆ ಪ್ರಾಯೋಗಿಕವಾಗಿ ಆರಂಭವಾಗಲಿದ್ದು, ಮುಂದೆ ದೇಶದಾದ್ಯಂತ ವಿಸ್ತರಿಸಲು ಉದ್ದೇಶಿಸಲಾಗಿದೆ’ ಎಂದು ಮಾಹಿತಿ ನೀಡಿದರು.