<p><strong>ಬೆಂಗಳೂರು:</strong> ಅತಿ ಹೆಚ್ಚು ಜನಸಂಖ್ಯೆ ಇರುವ ಹಾಗೂ ಸಾಮಾಜಿಕ ಅಸಮಾನತೆ ಹೊಂದಿರುವ ಭಾರತದಲ್ಲಿ ಸಮುದಾಯದ ಅಭಿವೃದ್ಧಿ ಯೋಜನೆಗಳು ನಿರ್ದಿಷ್ಟ ಜನರಿಗೆ ಶೀಘ್ರ ತಲುಪಲು ತಂತ್ರಜ್ಞಾನದ ಬಳಕೆ ಅಗತ್ಯವಾಗಿದೆ ಎಂದು ಅಂತರರಾಷ್ಟ್ರೀಯ ಸಾಮಾಜಿಕ ಕಾರ್ಯಕರ್ತರ ಒಕ್ಕೂಟದ ಪದಾಧಿಕಾರಿ ಎಂ.ವಿ. ಶ್ರೀಗಣೇಶ್ ಪ್ರತಿಪಾದಿಸಿದರು.</p>.<p>ಬೆಂಗಳೂರು ನಗರ ವಿಶ್ವವಿದ್ಯಾಲಯ(ಬಿಸಿಯು) ಮತ್ತು ಭಾರತೀಯ ವೃತ್ತಿಪರ ಸಮಾಜ ಕಾರ್ಯ ಸಂಸ್ಥೆಯ ಜಂಟಿ ಸಹಯೋಗದಲ್ಲಿ ಆಯೋಜಿಸಿರುವ ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಸಮಾಜ ಸೇವೆಗಳ ತ್ವರಿತ ಅನುಷ್ಠಾನ ಮತ್ತು ಸರ್ಕಾರದ ನೀತಿ ನಿರೂಪಣೆಯಲ್ಲಿ ತಂತ್ರಜ್ಞಾನ ಪರಿಣಾಮಕಾರಿ ಸಾಧನವಾಗಿದೆ’ ಎಂದು ಅವರು ಪ್ರತಿಪಾದಿಸಿದರು.</p>.<p>‘ದತ್ತಾಂಶ ಸಂಗ್ರಹ ಮತ್ತು ತಾಂತ್ರಿಕ ಪರಿಣತಿಯ ಮೂಲಕ ಸಮಾಜ ಕಾರ್ಯ ಕ್ಷೇತ್ರದಲ್ಲಿ ಮಾನವ ಸಂಪನ್ಮೂಲವನ್ನು ಪರಿಣಾಮಕಾರಿಯಾಗಿ ಬಳಸಲು ಸಾಧ್ಯವಿದೆ’ ಎಂದು ಅವರು ವಿಶ್ಲೇಷಿಸಿದರು.</p>.<p>ವಿಶ್ರಾಂತ ಕುಲಪತಿ ಪ್ರೊ. ವೈ.ಎಸ್. ಸಿದ್ದೇಗೌಡ ಮಾತನಾಡಿ, ‘ಕೃತಕ ಬುದ್ಧಿಮತ್ತೆಯ ಕಾಲದಲ್ಲಿ ಬೋಧನೆ ಮತ್ತು ಕಲಿಕೆಯ ವಿಧಾನಗಳನ್ನು ಸೂಕ್ತ ರೀತಿಯಲ್ಲಿ ಮಾರ್ಪಡಿಸುವ ಅಗತ್ಯವಿದೆ’ ಎಂದು ಅಭಿಪ್ರಾಯಪಟ್ಟರು.</p>.<p>ಸಮ್ಮೇಳನದಲ್ಲಿ ಪ್ರೊ. ಐ.ಎ.ಷರೀಫ್, ಪ್ರೊ.ಎಲ್.ಎಸ್. ಗಾಂಧಿದಾಸ್ ಸಮಾಜ ಕಾರ್ಯ ಕ್ಷೇತ್ರದಲ್ಲಿನ ಹೊಸ ಸವಾಲುಗಳ ಕುರಿತು ವಿಶ್ಲೇಷಿಸಿದರು. ವಿವಿಧ ಕ್ಷೇತ್ರಗಳ ವಿಷಯ ಪರಿಣತರು ವಿಶೇಷ ಉಪನ್ಯಾಸಗಳನ್ನು ನೀಡಿದರು. ಬಿಸಿಯು ಕುಲಸಚಿವ ಪ್ರೊ.ಬಿ. ರಮೇಶ್, ಪ್ರೊ.ರಿತಿಕಾ ಸಿನ್ಹಾ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಅತಿ ಹೆಚ್ಚು ಜನಸಂಖ್ಯೆ ಇರುವ ಹಾಗೂ ಸಾಮಾಜಿಕ ಅಸಮಾನತೆ ಹೊಂದಿರುವ ಭಾರತದಲ್ಲಿ ಸಮುದಾಯದ ಅಭಿವೃದ್ಧಿ ಯೋಜನೆಗಳು ನಿರ್ದಿಷ್ಟ ಜನರಿಗೆ ಶೀಘ್ರ ತಲುಪಲು ತಂತ್ರಜ್ಞಾನದ ಬಳಕೆ ಅಗತ್ಯವಾಗಿದೆ ಎಂದು ಅಂತರರಾಷ್ಟ್ರೀಯ ಸಾಮಾಜಿಕ ಕಾರ್ಯಕರ್ತರ ಒಕ್ಕೂಟದ ಪದಾಧಿಕಾರಿ ಎಂ.ವಿ. ಶ್ರೀಗಣೇಶ್ ಪ್ರತಿಪಾದಿಸಿದರು.</p>.<p>ಬೆಂಗಳೂರು ನಗರ ವಿಶ್ವವಿದ್ಯಾಲಯ(ಬಿಸಿಯು) ಮತ್ತು ಭಾರತೀಯ ವೃತ್ತಿಪರ ಸಮಾಜ ಕಾರ್ಯ ಸಂಸ್ಥೆಯ ಜಂಟಿ ಸಹಯೋಗದಲ್ಲಿ ಆಯೋಜಿಸಿರುವ ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಸಮಾಜ ಸೇವೆಗಳ ತ್ವರಿತ ಅನುಷ್ಠಾನ ಮತ್ತು ಸರ್ಕಾರದ ನೀತಿ ನಿರೂಪಣೆಯಲ್ಲಿ ತಂತ್ರಜ್ಞಾನ ಪರಿಣಾಮಕಾರಿ ಸಾಧನವಾಗಿದೆ’ ಎಂದು ಅವರು ಪ್ರತಿಪಾದಿಸಿದರು.</p>.<p>‘ದತ್ತಾಂಶ ಸಂಗ್ರಹ ಮತ್ತು ತಾಂತ್ರಿಕ ಪರಿಣತಿಯ ಮೂಲಕ ಸಮಾಜ ಕಾರ್ಯ ಕ್ಷೇತ್ರದಲ್ಲಿ ಮಾನವ ಸಂಪನ್ಮೂಲವನ್ನು ಪರಿಣಾಮಕಾರಿಯಾಗಿ ಬಳಸಲು ಸಾಧ್ಯವಿದೆ’ ಎಂದು ಅವರು ವಿಶ್ಲೇಷಿಸಿದರು.</p>.<p>ವಿಶ್ರಾಂತ ಕುಲಪತಿ ಪ್ರೊ. ವೈ.ಎಸ್. ಸಿದ್ದೇಗೌಡ ಮಾತನಾಡಿ, ‘ಕೃತಕ ಬುದ್ಧಿಮತ್ತೆಯ ಕಾಲದಲ್ಲಿ ಬೋಧನೆ ಮತ್ತು ಕಲಿಕೆಯ ವಿಧಾನಗಳನ್ನು ಸೂಕ್ತ ರೀತಿಯಲ್ಲಿ ಮಾರ್ಪಡಿಸುವ ಅಗತ್ಯವಿದೆ’ ಎಂದು ಅಭಿಪ್ರಾಯಪಟ್ಟರು.</p>.<p>ಸಮ್ಮೇಳನದಲ್ಲಿ ಪ್ರೊ. ಐ.ಎ.ಷರೀಫ್, ಪ್ರೊ.ಎಲ್.ಎಸ್. ಗಾಂಧಿದಾಸ್ ಸಮಾಜ ಕಾರ್ಯ ಕ್ಷೇತ್ರದಲ್ಲಿನ ಹೊಸ ಸವಾಲುಗಳ ಕುರಿತು ವಿಶ್ಲೇಷಿಸಿದರು. ವಿವಿಧ ಕ್ಷೇತ್ರಗಳ ವಿಷಯ ಪರಿಣತರು ವಿಶೇಷ ಉಪನ್ಯಾಸಗಳನ್ನು ನೀಡಿದರು. ಬಿಸಿಯು ಕುಲಸಚಿವ ಪ್ರೊ.ಬಿ. ರಮೇಶ್, ಪ್ರೊ.ರಿತಿಕಾ ಸಿನ್ಹಾ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>