ರಾಜ್ಯದ ಕೃಷಿ ಸಚಿವ ಬಿ.ಸಿ ಪಾಟೀಲ್, ‘ಯಕ್ಷಗಾನ, ಡೊಳ್ಳುಕುಣಿತ, ಕಂಸಾಳೆ ನಮ್ಮ ಹಳ್ಳಿಗಾಡಿನ ನಿಜವಾದ ಸಾಂಸ್ಕೃತಿಕ ಕಲೆಯನ್ನು ಬಿಂಬಿಸುತ್ತವೆ. ಕೃಷಿ ವಿಶ್ವವಿದ್ಯಾನಿಲಯಗಳಲ್ಲಿ ರೈತರ ಮಕ್ಕಳಿಗೆ ಶೇ 40 ಇದ್ದ ಮೀಸಲಾತಿ ಪ್ರಮಾಣವನ್ನು ಶೇ 50ಕ್ಕೆ ಹೆಚ್ಚಿಸಲಾಗಿದೆ. ಇದರಿಂದ ಹೆಚ್ಚಿನ ರೈತರ ಮಕ್ಕಳು ಕೃಷಿ ಶಿಕ್ಷಣ ಪಡೆಯಲು ಸಹಾಯವಾಗಿದೆ’ ಎಂದು ಹೇಳಿದರು.