<p><strong>ಬೆಂಗಳೂರು: </strong>ಹದಿಹರೆಯ ಗರ್ಭಧಾರಣೆ ಅಪಾಯದ ಬಗ್ಗೆ ಆರೋಗ್ಯ ಇಲಾಖೆ ಹಾಗೂ ಸರ್ಕಾರೇತರ ಸಂಸ್ಥೆಗಳು ಜಾಗೃತಿ ಮೂಡಿಸುತ್ತಿದ್ದರೂ, ಇಲ್ಲಿನ ವಾಣಿವಿಲಾಸ ಆಸ್ಪತ್ರೆಯಲ್ಲಿ ಕಳೆದ ವರ್ಷ 1,190 ಹದಿಹರೆಯದ ಗರ್ಭಧಾರಣೆ ಪ್ರಕರಣಗಳು ವರದಿಯಾಗಿವೆ. </p>.<p>ಆಸ್ಪತ್ರೆಯ ವೈದ್ಯರು 2018ರಲ್ಲಿ 1,330 ಹಾಗೂ 2019ರಲ್ಲಿ 1,531 ಹದಿಹರೆಯದ ಗರ್ಭಧಾರಣೆ ಪ್ರಕರಣಗಳನ್ನು ನೋಡಿದ್ದಾರೆ. 2020 ಹಾಗೂ 2021ರಲ್ಲಿ ಕೋವಿಡ್ ಕಾರಣ ಈ ಪ್ರಕರಣಗಳನ್ನು ನೋಂದಣಿ ಮಾಡಿಲ್ಲ. 13 ವರ್ಷದ ಬಾಲಕಿ ಗರ್ಭಧರಿಸಿದ ಪ್ರಕರಣವೂ ಇಲ್ಲಿ ವರದಿಯಾಗಿದೆ. </p>.<p>‘ಶೇ 70ರಷ್ಟು ಪ್ರಕರಣಗಳಲ್ಲಿ ಗರ್ಭಧರಿಸಿದವರು ವಿವಾಹಿತರಾಗಿದ್ದಾರೆ’ ಎಂದು ಆಸ್ಪತ್ರೆಯ ಸಲಹೆಗಾರ್ತಿ ಚಂದನಾ ಡೆಲೀ ತಿಳಿಸಿದರು. </p>.<p>‘ಹದಿಹರೆಯದವರು ಗರ್ಭಧರಿಸಿದಲ್ಲಿ ಹೆರಿಗೆ ವೇಳೆ ಅಪಾಯ ಇರುತ್ತದೆ. ಅಧಿಕ ರಕ್ತದೊತ್ತಡದ ಸಮಸ್ಯೆ, ಮಗುವಿನ ಅಪೂರ್ಣ ಬೆಳವಣಿಗೆ, ರಕ್ತ ಹೀನತೆ, ಅಪೌಷ್ಟಿಕತೆ ಸೇರಿ ವಿವಿಧ ಸಮಸ್ಯೆಗಳು ಕಾಣಿಸಿಕೊಂಡು, ಪ್ರಾಣಕ್ಕೆ ಅಪಾಯವಾಗುವ ಸಾಧ್ಯತೆ ಇರುತ್ತದೆ’ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಡಾ.ಸಿ. ಸವಿತಾ ಹೇಳಿದರು. </p>.<p>‘ಬೆಂಗಳೂರಿನ ಸುತ್ತಮುತ್ತಲಿನ ಜಿಲ್ಲೆಗಳು ಹಾಗೂ ಹೊರ ರಾಜ್ಯಗಳಿಂದಲೂ ಆಸ್ಪತ್ರೆಗೆ ರೋಗಿಗಳು ಬರುತ್ತಾರೆ. ಹದಿಹರೆಯದ ಗರ್ಭಧಾರಣೆ ಪ್ರಕರಣಗಳಲ್ಲಿ ಶೇ 75ರಿಂದ ಶೇ 80ರಷ್ಟು ಮಂದಿ ಬೆಂಗಳೂರಿಗರೇ ಆಗಿದ್ದಾರೆ’ ಎಂದು ಸ್ತ್ರೀರೋಗ ತಜ್ಞೆ ಡಾ. ರಾಧಿಕಾ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಹದಿಹರೆಯ ಗರ್ಭಧಾರಣೆ ಅಪಾಯದ ಬಗ್ಗೆ ಆರೋಗ್ಯ ಇಲಾಖೆ ಹಾಗೂ ಸರ್ಕಾರೇತರ ಸಂಸ್ಥೆಗಳು ಜಾಗೃತಿ ಮೂಡಿಸುತ್ತಿದ್ದರೂ, ಇಲ್ಲಿನ ವಾಣಿವಿಲಾಸ ಆಸ್ಪತ್ರೆಯಲ್ಲಿ ಕಳೆದ ವರ್ಷ 1,190 ಹದಿಹರೆಯದ ಗರ್ಭಧಾರಣೆ ಪ್ರಕರಣಗಳು ವರದಿಯಾಗಿವೆ. </p>.<p>ಆಸ್ಪತ್ರೆಯ ವೈದ್ಯರು 2018ರಲ್ಲಿ 1,330 ಹಾಗೂ 2019ರಲ್ಲಿ 1,531 ಹದಿಹರೆಯದ ಗರ್ಭಧಾರಣೆ ಪ್ರಕರಣಗಳನ್ನು ನೋಡಿದ್ದಾರೆ. 2020 ಹಾಗೂ 2021ರಲ್ಲಿ ಕೋವಿಡ್ ಕಾರಣ ಈ ಪ್ರಕರಣಗಳನ್ನು ನೋಂದಣಿ ಮಾಡಿಲ್ಲ. 13 ವರ್ಷದ ಬಾಲಕಿ ಗರ್ಭಧರಿಸಿದ ಪ್ರಕರಣವೂ ಇಲ್ಲಿ ವರದಿಯಾಗಿದೆ. </p>.<p>‘ಶೇ 70ರಷ್ಟು ಪ್ರಕರಣಗಳಲ್ಲಿ ಗರ್ಭಧರಿಸಿದವರು ವಿವಾಹಿತರಾಗಿದ್ದಾರೆ’ ಎಂದು ಆಸ್ಪತ್ರೆಯ ಸಲಹೆಗಾರ್ತಿ ಚಂದನಾ ಡೆಲೀ ತಿಳಿಸಿದರು. </p>.<p>‘ಹದಿಹರೆಯದವರು ಗರ್ಭಧರಿಸಿದಲ್ಲಿ ಹೆರಿಗೆ ವೇಳೆ ಅಪಾಯ ಇರುತ್ತದೆ. ಅಧಿಕ ರಕ್ತದೊತ್ತಡದ ಸಮಸ್ಯೆ, ಮಗುವಿನ ಅಪೂರ್ಣ ಬೆಳವಣಿಗೆ, ರಕ್ತ ಹೀನತೆ, ಅಪೌಷ್ಟಿಕತೆ ಸೇರಿ ವಿವಿಧ ಸಮಸ್ಯೆಗಳು ಕಾಣಿಸಿಕೊಂಡು, ಪ್ರಾಣಕ್ಕೆ ಅಪಾಯವಾಗುವ ಸಾಧ್ಯತೆ ಇರುತ್ತದೆ’ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಡಾ.ಸಿ. ಸವಿತಾ ಹೇಳಿದರು. </p>.<p>‘ಬೆಂಗಳೂರಿನ ಸುತ್ತಮುತ್ತಲಿನ ಜಿಲ್ಲೆಗಳು ಹಾಗೂ ಹೊರ ರಾಜ್ಯಗಳಿಂದಲೂ ಆಸ್ಪತ್ರೆಗೆ ರೋಗಿಗಳು ಬರುತ್ತಾರೆ. ಹದಿಹರೆಯದ ಗರ್ಭಧಾರಣೆ ಪ್ರಕರಣಗಳಲ್ಲಿ ಶೇ 75ರಿಂದ ಶೇ 80ರಷ್ಟು ಮಂದಿ ಬೆಂಗಳೂರಿಗರೇ ಆಗಿದ್ದಾರೆ’ ಎಂದು ಸ್ತ್ರೀರೋಗ ತಜ್ಞೆ ಡಾ. ರಾಧಿಕಾ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>