<p><strong>ಬೆಂಗಳೂರು:</strong> ನಗರದ ಬಸವನಗುಡಿಯ ಅಶೋಕ ನಗರ ಅಂಚೆ ಕಚೇರಿಯನ್ನು ಪುನರಾರಂಭಿಸುವುದಾಗಿ ಸಂಸದ ತೇಜಸ್ವಿ ಸೂರ್ಯ ಭರವಸೆ ನೀಡಿದರು.</p>.<p>ಶಾಸಕ ರವಿಸುಬ್ರಮಣ್ಯ ಹಾಗೂ ಮಾಜಿ ಮೇಯರ್ ಕಟ್ಟೆ ಸತ್ಯನಾರಾಯಣ ನೇತೃತ್ವದಲ್ಲಿ ಬಂದ್ ಆಗಿರುವ ಅಶೋಕ ನಗರ ಅಂಚೆ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಲಾಯಿತು. ಸ್ಥಳಕ್ಕೆ ಆಗಮಿಸಿದ ತೇಜಸ್ವಿ ಅವರು ಪ್ರತಿಭಟನಕಾರರಿಂದ ಮನವಿ ಪತ್ರ ಸ್ವೀಕರಿಸಿ ಮಾತನಾಡಿದರು.</p>.<p>‘ಸ್ಥಳೀಯರ ಮನವಿಯನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ವಿಷಯನ್ನು ಕೇಂದ್ರ ಸಚಿವರು ಹಾಗೂ ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆ ಇತ್ಯರ್ಥಗೊಳಿಸಲಾಗುವುದು’ ಎಂದು ಹೇಳಿದರು.</p>.<p>ಅಂಚೆ ಇಲಾಖೆ ಅಧಿಕಾರಿಗಳು ಮತ್ತು ಬಸವನಗುಡಿಯ ನಾಗರಿಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಗರದ ಬಸವನಗುಡಿಯ ಅಶೋಕ ನಗರ ಅಂಚೆ ಕಚೇರಿಯನ್ನು ಪುನರಾರಂಭಿಸುವುದಾಗಿ ಸಂಸದ ತೇಜಸ್ವಿ ಸೂರ್ಯ ಭರವಸೆ ನೀಡಿದರು.</p>.<p>ಶಾಸಕ ರವಿಸುಬ್ರಮಣ್ಯ ಹಾಗೂ ಮಾಜಿ ಮೇಯರ್ ಕಟ್ಟೆ ಸತ್ಯನಾರಾಯಣ ನೇತೃತ್ವದಲ್ಲಿ ಬಂದ್ ಆಗಿರುವ ಅಶೋಕ ನಗರ ಅಂಚೆ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಲಾಯಿತು. ಸ್ಥಳಕ್ಕೆ ಆಗಮಿಸಿದ ತೇಜಸ್ವಿ ಅವರು ಪ್ರತಿಭಟನಕಾರರಿಂದ ಮನವಿ ಪತ್ರ ಸ್ವೀಕರಿಸಿ ಮಾತನಾಡಿದರು.</p>.<p>‘ಸ್ಥಳೀಯರ ಮನವಿಯನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ವಿಷಯನ್ನು ಕೇಂದ್ರ ಸಚಿವರು ಹಾಗೂ ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆ ಇತ್ಯರ್ಥಗೊಳಿಸಲಾಗುವುದು’ ಎಂದು ಹೇಳಿದರು.</p>.<p>ಅಂಚೆ ಇಲಾಖೆ ಅಧಿಕಾರಿಗಳು ಮತ್ತು ಬಸವನಗುಡಿಯ ನಾಗರಿಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>