‘ಆಟೊ, ಟ್ಯಾಕ್ಸಿ ಚಾಲನೆ ಮಾಡಿಕೊಂಡು ಜೀವನ ನಿರ್ವಹಣೆ ಮಾಡುತ್ತಿರುವ ಸುಮಾರು 11 ಲಕ್ಷ ಜನರ ಹೊಟ್ಟೆ ಮೇಲೆ ಹೊಡೆಯುವ ಕೆಲಸಕ್ಕೆ ಸಂಸದರು ಬೆಂಬಲ ನೀಡಿದ್ದಾರೆ. ಅವರು ಹೇಳಿಕೆ ನೀಡಿದ್ದು ಮಾತ್ರವಲ್ಲ, ಕಾರ್ಪೂಲಿಂಗ್ ಪರ ಸರ್ಕಾರಕ್ಕೆ ಪತ್ರವನ್ನೂ ಬರೆದಿದ್ದಾರೆ’ ಎಂದು ಒಕ್ಕೂಟದ ಅಧ್ಯಕ್ಷ ಎಸ್.ನಟರಾಜ ಶರ್ಮಾ ಭಾನುವಾರ ಸುದ್ದಿಗೋಷ್ಠಿಯಲ್ಲಿ ಬೇಸರ ವ್ಯಕ್ತಪಡಿಸಿದರು.