<p><strong>ಬೆಂಗಳೂರು:</strong> ರಾಜ್ಯದ ಪ್ರಭಾವಿ ರಾಜಕಾರಣಿಗಳು, ಸ್ವಾಮೀಜಿಗಳು ಹಾಗೂ ಅಧಿಕಾರಿಗಳ ದೂರವಾಣಿ ಕರೆಗಳ ಕದ್ದಾಲಿಕೆ ಪ್ರಕರಣ ಸಂಬಂಧ ತನಿಖೆ ಚುರುಕುಗೊಳಿಸಿರುವ ಸಿಬಿಐ ಅಧಿಕಾರಿಗಳು,ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಇನ್ಸ್ಪೆಕ್ಟರ್ಗಳನ್ನು ಭಾನುವಾರ ವಿಚಾರಣೆಗೆ ಒಳಪಡಿಸಿದರು.</p>.<p>‘ಕರೆಗಳನ್ನು ಕದ್ದಾಲಿಸಿದ್ದ ಹಾಗೂ ಸಾಕ್ಷ್ಯಾಧಾರ ನಾಶಪಡಿಸಿದ್ದ’ ಆರೋಪ ಎದುರಿಸುತ್ತಿರುವ ಸಿಸಿಬಿ ತಾಂತ್ರಿಕ ವಿಭಾಗದ ಇನ್ಸ್ಪೆಕ್ಟರ್ ಮಿರ್ಜಾ ಅಲಿ ಸೇರಿದಂತೆ ಆರು ಮಂದಿ ಇನ್ಸ್ಪೆಕ್ಟರ್ಗಳನ್ನು ಇತ್ತೀಚೆಗಷ್ಟೇ ಪ್ರತ್ಯೇಕವಾಗಿ ವಿಚಾರಣೆ ನಡೆಸಿ ಹೇಳಿಕೆ ಪಡೆಯಲಾಗಿತ್ತು.</p>.<p>ಭಾನುವಾರ ಮಧ್ಯಾಹ್ನ ಒಟ್ಟಿಗೆ ಆರು ಮಂದಿ ಇನ್ಸ್ಪೆಕ್ಟರ್ಗಳನ್ನು ಕುಮಾರ ಕೃಪ ಅತಿಥಿ ಗೃಹದಲ್ಲಿರುವ ಕಚೇರಿಗೆ ಕರೆಸಿದ್ದ ಸಿಬಿಐ ಎಸ್ಪಿ ಕಿರಣ್ ನೇತೃತ್ವದ ತಂಡ, ಮುಖಾಮುಖಿಯಾಗಿ ವಿಚಾರಣೆ ನಡೆಸಿತು.</p>.<p>ಸಂಜೆ 5ರವರೆಗೂ ನಡೆದ ವಿಚಾರಣೆಯಲ್ಲಿ ಇನ್ಸ್ಪೆಕ್ಟರ್ಗಳು ಸಿಬಿಐ ಅಧಿಕಾರಿಗಳ ಹಲವು ಪ್ರಶ್ನೆಗಳಿಗೆ ಉತ್ತರಿಸಿದರು. ಈ ಹಿಂದೆ ಇನ್ಸ್ಪೆಕ್ಟರ್ಗಳು ನೀಡಿದ್ದ ಹೇಳಿಕೆಯನ್ನು ಪರಸ್ಪರ ಹೋಲಿಕೆ ಮಾಡಿ ಸ್ಪಷ್ಟನೆ ಸಹ ಪಡೆಯಲಾಯಿತು ಎಂಬುದು ಗೊತ್ತಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯದ ಪ್ರಭಾವಿ ರಾಜಕಾರಣಿಗಳು, ಸ್ವಾಮೀಜಿಗಳು ಹಾಗೂ ಅಧಿಕಾರಿಗಳ ದೂರವಾಣಿ ಕರೆಗಳ ಕದ್ದಾಲಿಕೆ ಪ್ರಕರಣ ಸಂಬಂಧ ತನಿಖೆ ಚುರುಕುಗೊಳಿಸಿರುವ ಸಿಬಿಐ ಅಧಿಕಾರಿಗಳು,ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಇನ್ಸ್ಪೆಕ್ಟರ್ಗಳನ್ನು ಭಾನುವಾರ ವಿಚಾರಣೆಗೆ ಒಳಪಡಿಸಿದರು.</p>.<p>‘ಕರೆಗಳನ್ನು ಕದ್ದಾಲಿಸಿದ್ದ ಹಾಗೂ ಸಾಕ್ಷ್ಯಾಧಾರ ನಾಶಪಡಿಸಿದ್ದ’ ಆರೋಪ ಎದುರಿಸುತ್ತಿರುವ ಸಿಸಿಬಿ ತಾಂತ್ರಿಕ ವಿಭಾಗದ ಇನ್ಸ್ಪೆಕ್ಟರ್ ಮಿರ್ಜಾ ಅಲಿ ಸೇರಿದಂತೆ ಆರು ಮಂದಿ ಇನ್ಸ್ಪೆಕ್ಟರ್ಗಳನ್ನು ಇತ್ತೀಚೆಗಷ್ಟೇ ಪ್ರತ್ಯೇಕವಾಗಿ ವಿಚಾರಣೆ ನಡೆಸಿ ಹೇಳಿಕೆ ಪಡೆಯಲಾಗಿತ್ತು.</p>.<p>ಭಾನುವಾರ ಮಧ್ಯಾಹ್ನ ಒಟ್ಟಿಗೆ ಆರು ಮಂದಿ ಇನ್ಸ್ಪೆಕ್ಟರ್ಗಳನ್ನು ಕುಮಾರ ಕೃಪ ಅತಿಥಿ ಗೃಹದಲ್ಲಿರುವ ಕಚೇರಿಗೆ ಕರೆಸಿದ್ದ ಸಿಬಿಐ ಎಸ್ಪಿ ಕಿರಣ್ ನೇತೃತ್ವದ ತಂಡ, ಮುಖಾಮುಖಿಯಾಗಿ ವಿಚಾರಣೆ ನಡೆಸಿತು.</p>.<p>ಸಂಜೆ 5ರವರೆಗೂ ನಡೆದ ವಿಚಾರಣೆಯಲ್ಲಿ ಇನ್ಸ್ಪೆಕ್ಟರ್ಗಳು ಸಿಬಿಐ ಅಧಿಕಾರಿಗಳ ಹಲವು ಪ್ರಶ್ನೆಗಳಿಗೆ ಉತ್ತರಿಸಿದರು. ಈ ಹಿಂದೆ ಇನ್ಸ್ಪೆಕ್ಟರ್ಗಳು ನೀಡಿದ್ದ ಹೇಳಿಕೆಯನ್ನು ಪರಸ್ಪರ ಹೋಲಿಕೆ ಮಾಡಿ ಸ್ಪಷ್ಟನೆ ಸಹ ಪಡೆಯಲಾಯಿತು ಎಂಬುದು ಗೊತ್ತಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>