<p><strong>ಬೆಂಗಳೂರು</strong>: ‘ಶ್ರೀ ಕೃಷ್ಣದೇವರಾಯರು ಸ್ವತಃ ಬಹುಭಾಷಾ ಪಂಡಿತರಾಗಿ, ತೆಲುಗು ಮತ್ತು ಕನ್ನಡಕ್ಕೆ ಸ್ವರ್ಣಯುಗ ತಂದ ಮಹನೀಯ’ ಎಂದು ಉಪ ರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು ಅಭಿಪ್ರಾಯಪಟ್ಟರು.</p>.<p>ತೆಲುಗು ವಿಜ್ಞಾನ ಸಮಿತಿ ಆಯೋಜಿಸಿದ್ದ 512ನೇ ಶ್ರೀ ಕೃಷ್ಣ ದೇವರಾಯರ ಪಟ್ಟಾಭಿಷೇಕ ಮಹೋತ್ಸವ ಮತ್ತು ತೆಲುಗು ವಿಜ್ಞಾನ ಸಮಿತಿಯ 70ನೇ ಸಂಸ್ಥಾಪನಾ ದಿನೋತ್ಸವದ ಕಾರ್ಯಕ್ರಮದಲ್ಲಿ ಅವರುಆನ್ಲೈನ್ ಮೂಲಕ ಸಂದೇಶ ನೀಡಿದರು.</p>.<p>‘ಅಮುಕ್ತ ಮೌಲ್ಯದ’ ಎಂಬ ಗ್ರಂಥ ಬರೆದು ಸಾಹಿತ್ಯ ಕ್ಷೇತ್ರದಲ್ಲೂ ತಮ್ಮ ಛಾಪು ಮೂಡಿಸಿದರು. ಕೃಷಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ಮೂಲಕ ರೈತರಿಗೆ ನೆರವಾದ ಜನಪ್ರಿಯ ನಾಯಕರವರು’ ಎಂದು ಬಣ್ಣಿಸಿದರು.</p>.<p>‘ಕೃಷ್ಣದೇವರಾಯರು ತೆಲುಗು, ಕನ್ನಡದಲ್ಲಿ ಪ್ರಾವಿಣ್ಯತೆ ಹೊಂದಿದ್ದರು. ಎರಡೂ ಭಾಷೆಗಳಲ್ಲಿ ಮತ್ತು ಭಾಷಿಕರ ಬಗ್ಗೆ ಅಭಿಮಾನ ಹೊಂದಿದ್ದರು’ ಎಂದು ಸಮಿತಿ ಅಧ್ಯಕ್ಷ ಡಾ. ಎ.ರಾಧಾಕೃಷ್ಣ ರಾಜು ಹೇಳಿದರು.</p>.<p>‘ಮಾತೃಭಾಷೆಯಲ್ಲಿ ಮಕ್ಕಳಿಗೆ ಶಿಕ್ಷಣ ನೀಡಿದರೆ ವಿದ್ಯಾರ್ಥಿಗಳ ಸಾಮರ್ಥ್ಯ ಹೆಚ್ಚುತ್ತದೆ. ತಮಿಳುನಾಡಿನಲ್ಲಿ ದ್ವಿಭಾಷಾ ಸೂತ್ರ ಅನುಸರಿಸಲಾಗುತ್ತಿದೆ. ತೆಲುಗು ಮತ್ತು ಕನ್ನಡ ಭಾಷಾ ವಿದ್ಯಾರ್ಥಿಗಳಿಗೆ ಇದರಿಂದ ಅನ್ಯಾಯವಾಗುತ್ತಿದೆ. ಮಾತೃಭಾಷೆಯಲ್ಲಿ ಅವರು ಶಿಕ್ಷಣ ಪಡೆದರೂ 10ನೇ ತರಗತಿ ಪರೀಕ್ಷೆ ಬರೆಯಲು ತಮಿಳುನಾಡು ಸರ್ಕಾರ ಅನುಮತಿ ನೀಡುತ್ತಿಲ್ಲ. ಈ ಪರಿಸ್ಥಿತಿಯಲ್ಲಿ ತೆಲುಗು ಮತ್ತು ಕನ್ನಡ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ. ಇದಕ್ಕೆ ಶಾಶ್ವತ ಪರಿಹಾರ ದೊರಕಬೇಕಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಶ್ರೀ ಕೃಷ್ಣದೇವರಾಯರು ಸ್ವತಃ ಬಹುಭಾಷಾ ಪಂಡಿತರಾಗಿ, ತೆಲುಗು ಮತ್ತು ಕನ್ನಡಕ್ಕೆ ಸ್ವರ್ಣಯುಗ ತಂದ ಮಹನೀಯ’ ಎಂದು ಉಪ ರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು ಅಭಿಪ್ರಾಯಪಟ್ಟರು.</p>.<p>ತೆಲುಗು ವಿಜ್ಞಾನ ಸಮಿತಿ ಆಯೋಜಿಸಿದ್ದ 512ನೇ ಶ್ರೀ ಕೃಷ್ಣ ದೇವರಾಯರ ಪಟ್ಟಾಭಿಷೇಕ ಮಹೋತ್ಸವ ಮತ್ತು ತೆಲುಗು ವಿಜ್ಞಾನ ಸಮಿತಿಯ 70ನೇ ಸಂಸ್ಥಾಪನಾ ದಿನೋತ್ಸವದ ಕಾರ್ಯಕ್ರಮದಲ್ಲಿ ಅವರುಆನ್ಲೈನ್ ಮೂಲಕ ಸಂದೇಶ ನೀಡಿದರು.</p>.<p>‘ಅಮುಕ್ತ ಮೌಲ್ಯದ’ ಎಂಬ ಗ್ರಂಥ ಬರೆದು ಸಾಹಿತ್ಯ ಕ್ಷೇತ್ರದಲ್ಲೂ ತಮ್ಮ ಛಾಪು ಮೂಡಿಸಿದರು. ಕೃಷಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ಮೂಲಕ ರೈತರಿಗೆ ನೆರವಾದ ಜನಪ್ರಿಯ ನಾಯಕರವರು’ ಎಂದು ಬಣ್ಣಿಸಿದರು.</p>.<p>‘ಕೃಷ್ಣದೇವರಾಯರು ತೆಲುಗು, ಕನ್ನಡದಲ್ಲಿ ಪ್ರಾವಿಣ್ಯತೆ ಹೊಂದಿದ್ದರು. ಎರಡೂ ಭಾಷೆಗಳಲ್ಲಿ ಮತ್ತು ಭಾಷಿಕರ ಬಗ್ಗೆ ಅಭಿಮಾನ ಹೊಂದಿದ್ದರು’ ಎಂದು ಸಮಿತಿ ಅಧ್ಯಕ್ಷ ಡಾ. ಎ.ರಾಧಾಕೃಷ್ಣ ರಾಜು ಹೇಳಿದರು.</p>.<p>‘ಮಾತೃಭಾಷೆಯಲ್ಲಿ ಮಕ್ಕಳಿಗೆ ಶಿಕ್ಷಣ ನೀಡಿದರೆ ವಿದ್ಯಾರ್ಥಿಗಳ ಸಾಮರ್ಥ್ಯ ಹೆಚ್ಚುತ್ತದೆ. ತಮಿಳುನಾಡಿನಲ್ಲಿ ದ್ವಿಭಾಷಾ ಸೂತ್ರ ಅನುಸರಿಸಲಾಗುತ್ತಿದೆ. ತೆಲುಗು ಮತ್ತು ಕನ್ನಡ ಭಾಷಾ ವಿದ್ಯಾರ್ಥಿಗಳಿಗೆ ಇದರಿಂದ ಅನ್ಯಾಯವಾಗುತ್ತಿದೆ. ಮಾತೃಭಾಷೆಯಲ್ಲಿ ಅವರು ಶಿಕ್ಷಣ ಪಡೆದರೂ 10ನೇ ತರಗತಿ ಪರೀಕ್ಷೆ ಬರೆಯಲು ತಮಿಳುನಾಡು ಸರ್ಕಾರ ಅನುಮತಿ ನೀಡುತ್ತಿಲ್ಲ. ಈ ಪರಿಸ್ಥಿತಿಯಲ್ಲಿ ತೆಲುಗು ಮತ್ತು ಕನ್ನಡ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ. ಇದಕ್ಕೆ ಶಾಶ್ವತ ಪರಿಹಾರ ದೊರಕಬೇಕಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>