ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮನವಿ ಸಲ್ಲಿಸಿರುವ ಒಕ್ಕೂಟದ ಪದಾಧಿಕಾರಿಗಳು, ‘ಮುಜರಾಯಿ ದೇವಾಲಯಗಳಲ್ಲಿ ವಂಶಪಾರಂಪರ್ಯವಾಗಿ ಕಾರ್ಯನಿರ್ವಹಿಸುತ್ತಿರುವ ಅರ್ಚಕರ ಸೇವಾ ನಿವೃತ್ತಿಯನ್ನು 65 ವರ್ಷಕ್ಕೆ ನಿಗದಿಪಡಿಸಿರುವುದು ಸರಿಯಲ್ಲ. ಅರ್ಚಕ ಕೆಲಸವನ್ನು ಮಾಡಲು ಶಕ್ತರಾಗಿರುವವರನ್ನು ಮುಂದುವರಿಸಬೇಕು’ ಎಂದು ಕೋರಿದರು.