<p><strong>ಬೆಂಗಳೂರು:</strong>ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿ ಗಣೇಶ ದೇವಸ್ಥಾನ ನಿರ್ಮಾಣಕ್ಕೆ ಸಂಬಂಧಿಸಿದಂತೆ ಇದೇ 13ರಂದು ಸಿಂಡಿಕೇಟ್ ವಿಶೇಷ ಸಭೆ ನಡೆಯಲಿದೆ.</p>.<p>ಈ ಸಭೆಯಲ್ಲಿ ದೇವಸ್ಥಾನಕ್ಕೆ ನಿರ್ದಿಷ್ಟ ಜಾಗ ನೀಡುವ ಸಂಬಂಧ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.</p>.<p>ದೇವಸ್ಥಾನ ನಿರ್ಮಾಣ ಕಾಮಗಾರಿ ಶುಕ್ರವಾರವೂ ಮುಂದುವರಿಸಿದ್ದಕ್ಕೆ ಪ್ರತಿಭಟನೆ ನಡೆಸಲು ಮುಂದಾದ ಕೆಲವು ವಿದ್ಯಾರ್ಥಿಗಳನ್ನು ಪ್ರಾಧ್ಯಾಪಕರೇ ಸಮಾಧಾನಪಡಿಸಿದರು.</p>.<p>ವಿದ್ಯಾರ್ಥಿಗಳು ಮತ್ತು ಪ್ರಾಧ್ಯಾಪಕರೇ ಜಾಗವನ್ನು ಗುರುತಿಸಲಿ ಎನ್ನುವ ಆಗ್ರಹ ಕೂಡ ವಿದ್ಯಾರ್ಥಿ ಸಮೂಹದಿಂದ ವ್ಯಕ್ತವಾಗಿವೆ.</p>.<p>‘ಗಣೇಶ ದೇವಸ್ಥಾನ ನಿರ್ಮಾಣಕ್ಕೆ ಸಂಬಂಧಿಸಿದಂತೆ ಹಿಂದಿನ ಕುಲಪತಿ ಅವರು ಸಿಂಡಿಕೇಟ್ ಅನುಮೋದನೆ ಪಡೆದಿರಲಿಲ್ಲ. ವಿಶ್ವವಿದ್ಯಾಲಯದ ಜತೆ ಮಾತುಕತೆ ನಡೆಸಿ, ಸೌಹಾರ್ದಯುತವಾಗಿ ದೇವಸ್ಥಾನ ಸ್ಥಳಾಂತರಿಸಿ ಎಂದು ಸರ್ಕಾರ ಆದೇಶ ನೀಡಿತ್ತು. ಈ ಬಗ್ಗೆಯೂ ಸಿಂಡಿಕೇಟ್ ಸಭೆಯಲ್ಲಿ ಚರ್ಚಿಸಿಲ್ಲ’ ಎಂದು ಸಿಂಡಿಕೇಟ್ ಸದಸ್ಯ ಡಾ. ಎಚ್. ಸುಧಾಕರ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong>ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿ ಗಣೇಶ ದೇವಸ್ಥಾನ ನಿರ್ಮಾಣಕ್ಕೆ ಸಂಬಂಧಿಸಿದಂತೆ ಇದೇ 13ರಂದು ಸಿಂಡಿಕೇಟ್ ವಿಶೇಷ ಸಭೆ ನಡೆಯಲಿದೆ.</p>.<p>ಈ ಸಭೆಯಲ್ಲಿ ದೇವಸ್ಥಾನಕ್ಕೆ ನಿರ್ದಿಷ್ಟ ಜಾಗ ನೀಡುವ ಸಂಬಂಧ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.</p>.<p>ದೇವಸ್ಥಾನ ನಿರ್ಮಾಣ ಕಾಮಗಾರಿ ಶುಕ್ರವಾರವೂ ಮುಂದುವರಿಸಿದ್ದಕ್ಕೆ ಪ್ರತಿಭಟನೆ ನಡೆಸಲು ಮುಂದಾದ ಕೆಲವು ವಿದ್ಯಾರ್ಥಿಗಳನ್ನು ಪ್ರಾಧ್ಯಾಪಕರೇ ಸಮಾಧಾನಪಡಿಸಿದರು.</p>.<p>ವಿದ್ಯಾರ್ಥಿಗಳು ಮತ್ತು ಪ್ರಾಧ್ಯಾಪಕರೇ ಜಾಗವನ್ನು ಗುರುತಿಸಲಿ ಎನ್ನುವ ಆಗ್ರಹ ಕೂಡ ವಿದ್ಯಾರ್ಥಿ ಸಮೂಹದಿಂದ ವ್ಯಕ್ತವಾಗಿವೆ.</p>.<p>‘ಗಣೇಶ ದೇವಸ್ಥಾನ ನಿರ್ಮಾಣಕ್ಕೆ ಸಂಬಂಧಿಸಿದಂತೆ ಹಿಂದಿನ ಕುಲಪತಿ ಅವರು ಸಿಂಡಿಕೇಟ್ ಅನುಮೋದನೆ ಪಡೆದಿರಲಿಲ್ಲ. ವಿಶ್ವವಿದ್ಯಾಲಯದ ಜತೆ ಮಾತುಕತೆ ನಡೆಸಿ, ಸೌಹಾರ್ದಯುತವಾಗಿ ದೇವಸ್ಥಾನ ಸ್ಥಳಾಂತರಿಸಿ ಎಂದು ಸರ್ಕಾರ ಆದೇಶ ನೀಡಿತ್ತು. ಈ ಬಗ್ಗೆಯೂ ಸಿಂಡಿಕೇಟ್ ಸಭೆಯಲ್ಲಿ ಚರ್ಚಿಸಿಲ್ಲ’ ಎಂದು ಸಿಂಡಿಕೇಟ್ ಸದಸ್ಯ ಡಾ. ಎಚ್. ಸುಧಾಕರ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>