‘ಗಣೇಶ ದೇವಸ್ಥಾನ ನಿರ್ಮಾಣಕ್ಕೆ ಸಂಬಂಧಿಸಿದಂತೆ ಹಿಂದಿನ ಕುಲಪತಿ ಅವರು ಸಿಂಡಿಕೇಟ್ ಅನುಮೋದನೆ ಪಡೆದಿರಲಿಲ್ಲ. ವಿಶ್ವವಿದ್ಯಾಲಯದ ಜತೆ ಮಾತುಕತೆ ನಡೆಸಿ, ಸೌಹಾರ್ದಯುತವಾಗಿ ದೇವಸ್ಥಾನ ಸ್ಥಳಾಂತರಿಸಿ ಎಂದು ಸರ್ಕಾರ ಆದೇಶ ನೀಡಿತ್ತು. ಈ ಬಗ್ಗೆಯೂ ಸಿಂಡಿಕೇಟ್ ಸಭೆಯಲ್ಲಿ ಚರ್ಚಿಸಿಲ್ಲ’ ಎಂದು ಸಿಂಡಿಕೇಟ್ ಸದಸ್ಯ ಡಾ. ಎಚ್. ಸುಧಾಕರ್ ತಿಳಿಸಿದರು.