<p><strong>ಬೆಂಗಳೂರು</strong>: ‘ಮುಜರಾಯಿ ದೇವಸ್ಥಾನಗಳನ್ನು ಸರ್ಕಾರದಿಂದ ಮುಕ್ತ ಮಾಡಬೇಕು ಎಂದು ಪೇಜಾವರ ಸ್ವಾಮೀಜಿ ಅಜ್ಞಾನದಿಂದ, ಯಾವುದೋ ಆವೇಶದಲ್ಲಿ ಹೇಳುತ್ತಿದ್ದಾರೆ. ಮುಜರಾಯಿ ದೇವಸ್ಥಾನಗಳನ್ನು ಖಾಸಗೀಕರಣ ಮಾಡಬಾರದು’ ಎಂದು ಅಖಿಲ ಕರ್ನಾಟಕ ಅರ್ಚಕರ ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟದ ಅಧ್ಯಕ್ಷ ಕೆ.ಇ. ರಾಧಾಕೃಷ್ಣ ತಿಳಿಸಿದರು.</p>.<p>‘ಪೇಜಾವರ ಮಠದ ವಿಶ್ವಪ್ರಸನ್ನ ಸ್ವಾಮೀಜಿಯವರು ಕೆಲವು ಬಾರಿ ಈ ಬಗ್ಗೆ ಮಾತನಾಡಿದ್ದಾರೆ. ರಾಜಾಧಿರಾಜರ ಕಾಲದಿಂದ ಸರ್ಕಾರಿ ಆಡಳಿತದ ಸುಪರ್ದಿಯಲ್ಲೇ ಇರುವ ದೇವಸ್ಥಾನಗಳನ್ನು ಖಾಸಗಿಯವರ ಕೈಗೆ ನೀಡುವುದು ಸರಿಯಲ್ಲ’ ಎಂದು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>‘ದೇವಸ್ಥಾನಗಳನ್ನು ಅಭಿವೃದ್ಧಿ ಮಾಡುತ್ತೇವೆ. ಅದಕ್ಕಾಗಿ ನಮ್ಮ ಸುಪರ್ದಿಗೆ ಒಪ್ಪಿಸಿ ಎಂದು ಕೆಲವು ದೊಡ್ಡ ಮಠಗಳವರು ಹೇಳುವುದು ಕೂಡ ಸರಿಯಲ್ಲ. ಅವರಿಗೆ ಅಭಿವೃದ್ಧಿ ಮಾಡಲು ಮನಸ್ಸಿದ್ದರೆ ಖಂಡಿತ ಅವಕಾಶ ಇದೆ. ಆದರೆ, ಅದಕ್ಕಾಗಿ ದೇವಸ್ಥಾನದ ಮಾಲೀಕತ್ವ ಕೇಳಬಾರದು’ ಎಂದು ಹೇಳಿದರು.</p>.<p>‘ಹಿಂದೆ ಆದಿಚುಂಚನಗಿರಿ ಮಠದವರು ‘ಸಿ’ ಶ್ರೇಣಿಯ ದೇವಸ್ಥಾನಗಳನ್ನು ಕೇಳಿದ್ದರು. ನಾವು ವಿರೋಧಿಸಿದ್ದೆವು. ಮುಂದೆಯೂ ಮುಜರಾಯಿ ದೇವಸ್ಥಾನಗಳು ಸರ್ಕಾರದ ಅಡಿಯಲ್ಲೇ ಇರಬೇಕು’ ಎಂದು ಒಕ್ಕೂಟದ ಕಾರ್ಯದರ್ಶಿ ಕೆ.ಎಸ್.ಎನ್. ದೀಕ್ಷಿತ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಮುಜರಾಯಿ ದೇವಸ್ಥಾನಗಳನ್ನು ಸರ್ಕಾರದಿಂದ ಮುಕ್ತ ಮಾಡಬೇಕು ಎಂದು ಪೇಜಾವರ ಸ್ವಾಮೀಜಿ ಅಜ್ಞಾನದಿಂದ, ಯಾವುದೋ ಆವೇಶದಲ್ಲಿ ಹೇಳುತ್ತಿದ್ದಾರೆ. ಮುಜರಾಯಿ ದೇವಸ್ಥಾನಗಳನ್ನು ಖಾಸಗೀಕರಣ ಮಾಡಬಾರದು’ ಎಂದು ಅಖಿಲ ಕರ್ನಾಟಕ ಅರ್ಚಕರ ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟದ ಅಧ್ಯಕ್ಷ ಕೆ.ಇ. ರಾಧಾಕೃಷ್ಣ ತಿಳಿಸಿದರು.</p>.<p>‘ಪೇಜಾವರ ಮಠದ ವಿಶ್ವಪ್ರಸನ್ನ ಸ್ವಾಮೀಜಿಯವರು ಕೆಲವು ಬಾರಿ ಈ ಬಗ್ಗೆ ಮಾತನಾಡಿದ್ದಾರೆ. ರಾಜಾಧಿರಾಜರ ಕಾಲದಿಂದ ಸರ್ಕಾರಿ ಆಡಳಿತದ ಸುಪರ್ದಿಯಲ್ಲೇ ಇರುವ ದೇವಸ್ಥಾನಗಳನ್ನು ಖಾಸಗಿಯವರ ಕೈಗೆ ನೀಡುವುದು ಸರಿಯಲ್ಲ’ ಎಂದು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>‘ದೇವಸ್ಥಾನಗಳನ್ನು ಅಭಿವೃದ್ಧಿ ಮಾಡುತ್ತೇವೆ. ಅದಕ್ಕಾಗಿ ನಮ್ಮ ಸುಪರ್ದಿಗೆ ಒಪ್ಪಿಸಿ ಎಂದು ಕೆಲವು ದೊಡ್ಡ ಮಠಗಳವರು ಹೇಳುವುದು ಕೂಡ ಸರಿಯಲ್ಲ. ಅವರಿಗೆ ಅಭಿವೃದ್ಧಿ ಮಾಡಲು ಮನಸ್ಸಿದ್ದರೆ ಖಂಡಿತ ಅವಕಾಶ ಇದೆ. ಆದರೆ, ಅದಕ್ಕಾಗಿ ದೇವಸ್ಥಾನದ ಮಾಲೀಕತ್ವ ಕೇಳಬಾರದು’ ಎಂದು ಹೇಳಿದರು.</p>.<p>‘ಹಿಂದೆ ಆದಿಚುಂಚನಗಿರಿ ಮಠದವರು ‘ಸಿ’ ಶ್ರೇಣಿಯ ದೇವಸ್ಥಾನಗಳನ್ನು ಕೇಳಿದ್ದರು. ನಾವು ವಿರೋಧಿಸಿದ್ದೆವು. ಮುಂದೆಯೂ ಮುಜರಾಯಿ ದೇವಸ್ಥಾನಗಳು ಸರ್ಕಾರದ ಅಡಿಯಲ್ಲೇ ಇರಬೇಕು’ ಎಂದು ಒಕ್ಕೂಟದ ಕಾರ್ಯದರ್ಶಿ ಕೆ.ಎಸ್.ಎನ್. ದೀಕ್ಷಿತ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>