<p><strong>ಬೆಂಗಳೂರು:</strong> ಶಿವಮೊಗ್ಗ, ಉಡುಪಿ ಹಾಗೂ ನಗರದ ಬನಶಂಕರಿ ದೇವಸ್ಥಾನವೊಂದರಲ್ಲಿ ಚಿನ್ನ ಹಾಗೂ ನಗದು ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಬನಶಂಕರಿ ಪೊಲೀಸರು ಆರೋಪಿಗಳ ವಿಚಾರಣೆ ತೀವ್ರಗೊಳಿಸಿದ್ದಾರೆ.</p>.<p>ಅರ್ಚಕ ಪ್ರವೀಣ್ ಭಟ್ ಮತ್ತು ಸಂತೋಷ್ ಅವರ ವಿಚಾರಣೆ ವೇಳೆ ಆರೋಪಿಗಳು ಹೇಗೆ ಕೃತ್ಯ ಎಸಗುತ್ತಿದ್ದರು ಎಂಬ ಸಂಗತಿ ಗೊತ್ತಾಗಿದೆ.</p>.<p>ಪ್ರವೀಣ್ ಭಟ್ ಎಂಬಾತ ದೇವಸ್ಥಾನದಲ್ಲಿ ಬೆಳಿಗ್ಗೆ ಪೂಜೆ ಮಾಡುವುದು, ರಾತ್ರಿ ವೇಳೆ ಅದೇ ದೇವಸ್ಥಾನದಲ್ಲಿ ಚಿನ್ನ, ಬೆಳ್ಳಿ ಆಭರಣ ಹಾಗೂ ನಗದು ಕಳ್ಳತನ ಮಾಡುತ್ತಿದ್ದ ಎಂಬ ಸಂಗತಿ ಗೊತ್ತಾಗಿದೆ.</p>.<p>ಕಳ್ಳತನ ಪ್ರಕರಣವೊಂದರಲ್ಲಿ ಪ್ರವೀಣ್ ಭಟ್ ಕಾರಾಗೃಹಕ್ಕೆ ಹೋಗಿದ್ದ. ಅದೇ ಜೈಲಿನಲ್ಲಿ ಪರಿಚಯವಾಗಿದ್ದ ಮತ್ತೊಬ್ಬ ಕಳ್ಳನ ನೆರವಿನಿಂದ ಚಿನ್ನಾಭರಣ ಕದ್ದು ಮಾರಾಟ ಮಾಡುತ್ತಿದ್ದ. ಪ್ರತಿಸಲ ಕಳ್ಳತನ ಮಾಡಿದ ನಂತರ ಆರೋಪಿಗಳು ದೇವರ ಮುಂದೆ ಕ್ಷಮಿಸಿ ಎಂಬುದಾಗಿ ಕೈಮುಗಿಯುತ್ತಿದ್ದರು ಎಂದು ಮೂಲಗಳು ಹೇಳಿವೆ. </p>.<p>‘ಪ್ರವೀಣ್ ಭಟ್ ಶಿವಮೊಗ್ಗ, ಉಡುಪಿಯಲ್ಲಿ ಅರ್ಚಕನಾಗಿದ್ದ. ಅಲ್ಲಿ ಹೋಮ, ಹವನ, ಪೂಜೆ ಮಾಡಿಕೊಂಡಿದ್ದ. ರಾತ್ರಿ ಅದೇ ದೇವಾಲಯದಲ್ಲಿ ದೇವರ ಬೆಳ್ಳಿ ಸಾಮಗ್ರಿಗಳು, ಹಿತ್ತಾಳೆ ವಸ್ತುಗಳು, ಚಿನ್ನಾಭರಣ ಕದ್ದು ಮಾರಾಟ ಮಾಡುತ್ತಿದ್ದ’ ಎಂದು ಪೊಲೀಸರು ಹೇಳಿದರು.</p>.<p>‘ಬನಶಂಕರಿ ದೇವಾಲಯದಲ್ಲಿ ಅರ್ಚಕನಾಗಿದ್ದ ವೇಳೆ ಕಳ್ಳತನ ಮಾಡಿದ್ದ. ದೇವಾಲಯದ ಆಡಳಿತ ಮಂಡಳಿ ಸದಸ್ಯರು, ಪರಿಶೀಲನೆ ನಡೆಸಿ ಬಳಿಕ ದೂರು ನೀಡಿದ್ದರು. ದೂರು ಆಧರಿಸಿ ಬನ್ನೇರುಘಟ್ಟ ಸಮೀಪದ ಗೊಟ್ಟಿಗೇರೆ ಬಳಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಆರೋಪಿಯನ್ನು ಬಂಧಿಸಲಾಗಿತ್ತು’ ಎಂದು ಮೂಲಗಳು ಹೇಳಿವೆ.</p>.<p><strong>₹14 ಲಕ್ಷ ಮೌಲ್ಯದ ಸಾಮಗ್ರಿಗಳು ವಶ</strong></p><p>ಆರೋಪಿಗಳಿಂದ ₹14 ಲಕ್ಷ ಮೌಲ್ಯದ ವಿವಿಧ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಇಬ್ಬರ ವಿರುದ್ಧವೂ ಬನಶಂಕರಿ, ಜಯನಗರ, ಕುಮಾರಸ್ವಾಮಿ, ಜೆ.ಪಿ ನಗರ ಸೇರಿ 11 ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಶಿವಮೊಗ್ಗ, ಉಡುಪಿ ಹಾಗೂ ನಗರದ ಬನಶಂಕರಿ ದೇವಸ್ಥಾನವೊಂದರಲ್ಲಿ ಚಿನ್ನ ಹಾಗೂ ನಗದು ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಬನಶಂಕರಿ ಪೊಲೀಸರು ಆರೋಪಿಗಳ ವಿಚಾರಣೆ ತೀವ್ರಗೊಳಿಸಿದ್ದಾರೆ.</p>.<p>ಅರ್ಚಕ ಪ್ರವೀಣ್ ಭಟ್ ಮತ್ತು ಸಂತೋಷ್ ಅವರ ವಿಚಾರಣೆ ವೇಳೆ ಆರೋಪಿಗಳು ಹೇಗೆ ಕೃತ್ಯ ಎಸಗುತ್ತಿದ್ದರು ಎಂಬ ಸಂಗತಿ ಗೊತ್ತಾಗಿದೆ.</p>.<p>ಪ್ರವೀಣ್ ಭಟ್ ಎಂಬಾತ ದೇವಸ್ಥಾನದಲ್ಲಿ ಬೆಳಿಗ್ಗೆ ಪೂಜೆ ಮಾಡುವುದು, ರಾತ್ರಿ ವೇಳೆ ಅದೇ ದೇವಸ್ಥಾನದಲ್ಲಿ ಚಿನ್ನ, ಬೆಳ್ಳಿ ಆಭರಣ ಹಾಗೂ ನಗದು ಕಳ್ಳತನ ಮಾಡುತ್ತಿದ್ದ ಎಂಬ ಸಂಗತಿ ಗೊತ್ತಾಗಿದೆ.</p>.<p>ಕಳ್ಳತನ ಪ್ರಕರಣವೊಂದರಲ್ಲಿ ಪ್ರವೀಣ್ ಭಟ್ ಕಾರಾಗೃಹಕ್ಕೆ ಹೋಗಿದ್ದ. ಅದೇ ಜೈಲಿನಲ್ಲಿ ಪರಿಚಯವಾಗಿದ್ದ ಮತ್ತೊಬ್ಬ ಕಳ್ಳನ ನೆರವಿನಿಂದ ಚಿನ್ನಾಭರಣ ಕದ್ದು ಮಾರಾಟ ಮಾಡುತ್ತಿದ್ದ. ಪ್ರತಿಸಲ ಕಳ್ಳತನ ಮಾಡಿದ ನಂತರ ಆರೋಪಿಗಳು ದೇವರ ಮುಂದೆ ಕ್ಷಮಿಸಿ ಎಂಬುದಾಗಿ ಕೈಮುಗಿಯುತ್ತಿದ್ದರು ಎಂದು ಮೂಲಗಳು ಹೇಳಿವೆ. </p>.<p>‘ಪ್ರವೀಣ್ ಭಟ್ ಶಿವಮೊಗ್ಗ, ಉಡುಪಿಯಲ್ಲಿ ಅರ್ಚಕನಾಗಿದ್ದ. ಅಲ್ಲಿ ಹೋಮ, ಹವನ, ಪೂಜೆ ಮಾಡಿಕೊಂಡಿದ್ದ. ರಾತ್ರಿ ಅದೇ ದೇವಾಲಯದಲ್ಲಿ ದೇವರ ಬೆಳ್ಳಿ ಸಾಮಗ್ರಿಗಳು, ಹಿತ್ತಾಳೆ ವಸ್ತುಗಳು, ಚಿನ್ನಾಭರಣ ಕದ್ದು ಮಾರಾಟ ಮಾಡುತ್ತಿದ್ದ’ ಎಂದು ಪೊಲೀಸರು ಹೇಳಿದರು.</p>.<p>‘ಬನಶಂಕರಿ ದೇವಾಲಯದಲ್ಲಿ ಅರ್ಚಕನಾಗಿದ್ದ ವೇಳೆ ಕಳ್ಳತನ ಮಾಡಿದ್ದ. ದೇವಾಲಯದ ಆಡಳಿತ ಮಂಡಳಿ ಸದಸ್ಯರು, ಪರಿಶೀಲನೆ ನಡೆಸಿ ಬಳಿಕ ದೂರು ನೀಡಿದ್ದರು. ದೂರು ಆಧರಿಸಿ ಬನ್ನೇರುಘಟ್ಟ ಸಮೀಪದ ಗೊಟ್ಟಿಗೇರೆ ಬಳಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಆರೋಪಿಯನ್ನು ಬಂಧಿಸಲಾಗಿತ್ತು’ ಎಂದು ಮೂಲಗಳು ಹೇಳಿವೆ.</p>.<p><strong>₹14 ಲಕ್ಷ ಮೌಲ್ಯದ ಸಾಮಗ್ರಿಗಳು ವಶ</strong></p><p>ಆರೋಪಿಗಳಿಂದ ₹14 ಲಕ್ಷ ಮೌಲ್ಯದ ವಿವಿಧ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಇಬ್ಬರ ವಿರುದ್ಧವೂ ಬನಶಂಕರಿ, ಜಯನಗರ, ಕುಮಾರಸ್ವಾಮಿ, ಜೆ.ಪಿ ನಗರ ಸೇರಿ 11 ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>