ಕುಲಪತಿ ಅವರಿಗೆ ಮನವಿ ಸಲ್ಲಿಸಿರುವ ಬೆಂಗಳೂರು ವಿಶ್ವವಿದ್ಯಾಲಯ ಶಿಕ್ಷಕರ ಪರಿಷತ್ ಸದಸ್ಯರು, ‘ಯಾವುದೇ ಅನುಮತಿ ಪಡೆಯದೇ ದೇವಸ್ಥಾನ ನಿರ್ಮಿಸಲಾಗುತ್ತಿದೆ. ಇದನ್ನು ಪ್ರಶ್ನಿಸಿದ್ದಕ್ಕೆ ಶಿಕ್ಷಕರನ್ನು ಕಿಡಿಗೇಡಿಗಳೆಂದು ಅವಮಾನಿಸಲಾಗಿದೆ. ಈ ಅನಧಿಕೃತ ಕಾಮಗಾರಿಗೆ ಕಾರಣವಾಗಿರುವ ರಾಜರಾಜೇಶ್ವರಿನಗರ ವಲಯದ ರಸ್ತೆ ಮೂಲಸೌಕರ್ಯ ವಿಭಾಗದ ಎಂಜಿನಿಯರ್ ಅವರನ್ನು ಅಮಾನತು ಮಾಡಲು ಬಿಬಿಎಂಪಿ ಅಧಿಕಾರಿಗಳಿಗೆ ಮನವಿ ಸಲ್ಲಿಸಬೇಕು’ ಎಂದು ಆಗ್ರಹಿಸಿದ್ದಾರೆ.