ಲಾಕ್ಡೌನ್ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ 'ಸಿ' ಕೆಟಗರಿಯ 35 ಸಾವಿರ ದೇವಸ್ಥಾನಗಳ ಅರ್ಚಕರ ನೆರವಿಗೆ ತಸ್ತೀಕು ಹಣ ಬಿಡುಗಡೆ ಮಾಡುವ ಸಂಬಂಧ ಸರ್ಕಾರ 2020ರ ಮೇ 5ರಂದು ಆದೇಶ ಹೊರಡಿಸಿತ್ತು. ಹಾಸನ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಶಿವಮೊಗ್ಗ, ಬೆಂಗಳೂರು ನಗರ, ಹಾವೇರಿ, ಚಾಮರಾಜನಗರ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಅರ್ಚಕರಿಗೆ ತಸ್ತೀಕು ಹಣ ತಲುಪಿಲ್ಲ ಎಂದು ಪ್ರಮಾಣ ಪತ್ರದಲ್ಲಿ ವಿವರಿಸಲಾಗಿದೆ.