<p><strong>ಬೆಂಗಳೂರು:</strong> ಸುರಂಗ ರಸ್ತೆ ನಿರ್ಮಾಣಕ್ಕೆ ಟೆಂಡರ್ ದಾಖಲೆಗಳನ್ನು ಅಂತಿಮಗೊಳಿಸುತ್ತಿದ್ದು, ಎರಡು ವಾರಗಳಲ್ಲಿ ಕಾಮಗಾರಿಗೆ ಟೆಂಡರ್ ಆಹ್ವಾನಿಸಲಾಗುತ್ತದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಎಂ. ಮಹೇಶ್ವರ್ ರಾವ್ ತಿಳಿಸಿದರು.</p>.<p>‘ಅಭಿವೃದ್ಧಿ, ಕಾರ್ಯಾಚರಣೆ, ವರ್ಗಾವಣೆ (ಬಿಒಟಿ) ಆಧಾರದಲ್ಲಿ ಕೆಲವು ಪ್ರಕ್ರಿಯೆಗಳನ್ನು ಸೇರಿಸುವ ಕಾರ್ಯ ಪ್ರಗತಿಯಲ್ಲಿದೆ. ಇದೆಲ್ಲವನ್ನೂ ಮುಗಿಸಿ ಗರಿಷ್ಠ 15 ದಿನದೊಳಗೆ ಟೆಂಡರ್ ಕರೆಯುತ್ತೇವೆ’ ಎಂದು ಸುದ್ದಿಗಾರರಿಗೆ ಮಾಹಿತಿ ನೀಡಿದರು.</p>.<p>‘ಮರಗಳ ಗಣತಿ ಪ್ರಕ್ರಿಯೆ ನಡೆಯುತ್ತಿದ್ದು, ಈವರೆಗೆ ಸುಮಾರು ಆರು ಲಕ್ಷ ಮರಗಳ ಗಣತಿಯಾಗಿದೆ. ಇನ್ನು ಆರು ತಿಂಗಳಲ್ಲಿ ಗಣತಿ ಪ್ರಕ್ರಿಯೆ ಮುಗಿಯಲಿದೆ’ ಎಂದರು.</p>.<p>‘ಕೆಂಪೇಗೌಡ ದಿನಾಚರಣೆ ಜೂನ್ 27ರಂದು ನಡೆಯಲಿದೆ. ದೊಡ್ಡ ಪ್ರಮಾಣದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಎಲ್ಲರೂ ಭಾಗವಹಿಸಲು ಅನುಕೂಲವಾಗುವಂತೆ ಆಯೋಜಿಸಲಾಗುತ್ತದೆ’ ಎಂದು ತಿಳಿಸಿದರು.</p>.<p>‘ಕೆ.ಆರ್. ಮಾರುಕಟ್ಟೆಯಲ್ಲಿ ಹಲವು ಕಡೆ ಕೆಟ್ಟ ಪರಿಸ್ಥಿತಿ ಇದೆ. ನೆಲ ಅಂತಸ್ತಿನಲ್ಲಿ ಒಳಚರಂಡಿ ನೀರು ತುಂಬಿರುತ್ತದೆ. ಈ ಮಾರುಕಟ್ಟೆಯನ್ನು ಸಮಗ್ರವಾಗಿ ಅಭಿವೃದ್ಧಿ ಮಾಡುವ ಬಗ್ಗೆ ಯೋಜನೆ ರೂಪಿಸಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸುರಂಗ ರಸ್ತೆ ನಿರ್ಮಾಣಕ್ಕೆ ಟೆಂಡರ್ ದಾಖಲೆಗಳನ್ನು ಅಂತಿಮಗೊಳಿಸುತ್ತಿದ್ದು, ಎರಡು ವಾರಗಳಲ್ಲಿ ಕಾಮಗಾರಿಗೆ ಟೆಂಡರ್ ಆಹ್ವಾನಿಸಲಾಗುತ್ತದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಎಂ. ಮಹೇಶ್ವರ್ ರಾವ್ ತಿಳಿಸಿದರು.</p>.<p>‘ಅಭಿವೃದ್ಧಿ, ಕಾರ್ಯಾಚರಣೆ, ವರ್ಗಾವಣೆ (ಬಿಒಟಿ) ಆಧಾರದಲ್ಲಿ ಕೆಲವು ಪ್ರಕ್ರಿಯೆಗಳನ್ನು ಸೇರಿಸುವ ಕಾರ್ಯ ಪ್ರಗತಿಯಲ್ಲಿದೆ. ಇದೆಲ್ಲವನ್ನೂ ಮುಗಿಸಿ ಗರಿಷ್ಠ 15 ದಿನದೊಳಗೆ ಟೆಂಡರ್ ಕರೆಯುತ್ತೇವೆ’ ಎಂದು ಸುದ್ದಿಗಾರರಿಗೆ ಮಾಹಿತಿ ನೀಡಿದರು.</p>.<p>‘ಮರಗಳ ಗಣತಿ ಪ್ರಕ್ರಿಯೆ ನಡೆಯುತ್ತಿದ್ದು, ಈವರೆಗೆ ಸುಮಾರು ಆರು ಲಕ್ಷ ಮರಗಳ ಗಣತಿಯಾಗಿದೆ. ಇನ್ನು ಆರು ತಿಂಗಳಲ್ಲಿ ಗಣತಿ ಪ್ರಕ್ರಿಯೆ ಮುಗಿಯಲಿದೆ’ ಎಂದರು.</p>.<p>‘ಕೆಂಪೇಗೌಡ ದಿನಾಚರಣೆ ಜೂನ್ 27ರಂದು ನಡೆಯಲಿದೆ. ದೊಡ್ಡ ಪ್ರಮಾಣದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಎಲ್ಲರೂ ಭಾಗವಹಿಸಲು ಅನುಕೂಲವಾಗುವಂತೆ ಆಯೋಜಿಸಲಾಗುತ್ತದೆ’ ಎಂದು ತಿಳಿಸಿದರು.</p>.<p>‘ಕೆ.ಆರ್. ಮಾರುಕಟ್ಟೆಯಲ್ಲಿ ಹಲವು ಕಡೆ ಕೆಟ್ಟ ಪರಿಸ್ಥಿತಿ ಇದೆ. ನೆಲ ಅಂತಸ್ತಿನಲ್ಲಿ ಒಳಚರಂಡಿ ನೀರು ತುಂಬಿರುತ್ತದೆ. ಈ ಮಾರುಕಟ್ಟೆಯನ್ನು ಸಮಗ್ರವಾಗಿ ಅಭಿವೃದ್ಧಿ ಮಾಡುವ ಬಗ್ಗೆ ಯೋಜನೆ ರೂಪಿಸಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>