ಸಾವಿರಾರು ವರ್ಷಗಳಿಂದ ದಲಿತ, ತಳ ಸಮುದಾಯಗಳನ್ನು ತುಳಿಯುತ್ತಲೇ ಬಂದಿರುವ ಪುರೋಹಿತಶಾಹಿ ವರ್ಗ ಈಗ ದಲಿತರ ಸಮಾನತೆಯ ಕುರಿತು ಹುಸಿ ಭರವಸೆಗಳನ್ನು ನೀಡುತ್ತಿದೆ. ಪಠ್ಯಪುಸ್ತಕ ಪರಿಷ್ಕರಣೆಯ ನೆಪದಲ್ಲಿ ಸನಾತನ ಧರ್ಮವನ್ನು ಪುನರ್ ಪ್ರತಿಷ್ಠಾಪಿಸುವ ಯೋಜನೆ ರೂಪಿಸಿದೆ. ಪುರಾಣಗಳನ್ನೇ ಚರಿತ್ರೆಗಳೆಂದು ಬಿಂಬಿಸಿ, ಗೊಂದಲ ಸೃಷ್ಟಿಸುತ್ತಾ ಕೋಮುವಾದಿ ರಾಜಕಾರಣಕ್ಕೆ ಮುನ್ನುಡಿ ಬರೆಯುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.