ಬೆಂಗಳೂರು: ‘ಶಾಲಾಪಠ್ಯಪುಸ್ತಕ ಪರಿಷ್ಕರಣೆಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಪಠ್ಯವನ್ನು ಸಮಾಜ ವಿಜ್ಞಾನದಿಂದ ತೆಗೆದು, ಕನ್ನಡ ವಿಷಯಕ್ಕೆ ಸೇರಿಸುವ ಮೂಲಕ ಸರ್ಕಾರವುನಾರಾಯಣ ಗುರುಗಳ ತತ್ವ ಸಿದ್ಧಾಂತ ಹತ್ತಿಕುವ ಪ್ರಯತ್ನ ಮಾಡುತ್ತಿದೆ’ ಎಂದುರಾಷ್ಟ್ರೀಯ ಈಡಿಗ ಮಹಾ ಮಂಡಳದ ಅಧ್ಯಕ್ಷ ಪ್ರಣವಾನಂದ ಸ್ವಾಮೀಜಿ ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಮಾಜ ವಿಜ್ಞಾನ ಪಠ್ಯವನ್ನು ಎಲ್ಲ ವಿದ್ಯಾರ್ಥಿಗಳು ಓದುತ್ತಾರೆ. ಆದರೆ, ಕನ್ನಡವನ್ನು ಶೇ 70 ರಷ್ಟು ವಿದ್ಯಾರ್ಥಿಗಳು ಮಾತ್ರ ಓದುತ್ತಾರೆ. ನಾರಾಯಣ ಗುರುಗಳ ಜೀವನ ಚರಿತ್ರೆ ಪಠ್ಯಪುಸ್ತಕದಲ್ಲಿ ಸೇರ್ಪಡೆಯಾಗಬೇಕು’ ಎಂದು ಆಗ್ರಹಿಸಿದರು.