‘ಕುವೆಂಪು ಅವರ ಬಗ್ಗೆ ಇದ್ದ ವಿಷಯವನ್ನು ಕೈಬಿಡಲಾಗಿದೆ ಎಂಬ ಸುದ್ದಿಗಳು ಪ್ರಕಟವಾಗುತ್ತಿವೆ. ಬರಗೂರು ರಾಮಚಂದ್ರಪ್ಪ ಅವರ ಸಮಿತಿಯು 2017–18ನೇ ಸಾಲಿನಲ್ಲಿ ಪರಿಷ್ಕರಿಸಿದ್ದ ಪಠ್ಯಪುಸ್ತಕದಲ್ಲಿ ‘ಪ್ರತಿಯೊಬ್ಬರೂ ವಿಶಿಷ್ಟ’ ಎಂಬ ಪಾಠದಲ್ಲಿ ‘ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ’ ಶೀರ್ಷಿಕೆಯಡಿ ಇದ್ದ 9 ಸಾಲಗಳ ವಿಷಯಾಂಶವನ್ನು ಪರಿಸರ ಅಧ್ಯಯನ ಪಠ್ಯಪುಸ್ತಕದಲ್ಲೂ ಯಾವುದೇ ಬದಲಾವಣೆ ಇಲ್ಲದೆ ಮುಂದುವರಿಸಲಾಗಿದೆ’ ಎಂದು ಸಂಘ ತಿಳಿಸಿದೆ.