ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಹಿತಿ ಟಿ.ಜಿ.ಮುಡೂರು ನಿಧನ

Last Updated 20 ಏಪ್ರಿಲ್ 2022, 19:42 IST
ಅಕ್ಷರ ಗಾತ್ರ

ಸುಬ್ರಹ್ಮಣ್ಯ: ಸುಳ್ಯ ತಾಲ್ಲೂಕಿನ ಪಂಜ ನಿವಾಸಿ, ಸಾಹಿತಿ ತಮ್ಮಯ್ಯ ಗೌಡ ಮುಡೂರು (95) ವಯೋಸಹಜ ಅನಾರೋಗ್ಯದಿಂದ ಪುತ್ತೂರಿನಲ್ಲಿ ಬುಧವಾರ ನಿಧನರಾದರು. ಅವರಿಗೆ ಪುತ್ರ, ಮೂವರು ಪುತ್ರಿಯರು ಇದ್ದಾರೆ.

25 ವರ್ಷಕ್ಕೂ ಅಧಿಕ ಸಮಯ ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಪ್ರತಿನಿಧಿಯಾಗಿ, 8 ವರ್ಷಗಳ ಕಾಲ ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸಿದ್ದರು. ಸುಳ್ಯ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿಯೂ ಆಯ್ಕೆಾಗಿದ್ದರು. ಅವರ 30ಕ್ಕೂ ಹೆಚ್ಚು ಕೃತಿಗಳು ಪ್ರಕಟಗೊಂಡಿವೆ. ಗುರುವಾರ (ಏ.21) ಬೆಳಿಗ್ಗೆ ಅವರ ಅಂತಿಮ ದರ್ಶನದ ಬಳಿಕ ಮಧ್ಯಾಹ್ನ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬ ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT