ಬೆಂಗಳೂರು: ಸರ್ಕಾರ ನಿಗದಿಪಡಿಸಿದ ದರಕ್ಕಿಂತಲೂ ದುಬಾರಿ ಬೆಲೆಗೆ ಆಮ್ಲಜನಕ ಸಿಲಿಂಡರ್ ಮಾರುತ್ತಿದ್ದ ಆರೋಪದಡಿ ‘ಸಿಗಾ ಗ್ಯಾಸಸ್’ ವ್ಯವಸ್ಥಾಪಕ ರವಿಕುಮಾರ್ನನ್ನು (36) ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
‘ನಗರದ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಸಿಗಾ ಗ್ಯಾಸಸ್ ಘಟಕವಿದೆ. ಅಲ್ಲಿಯೇ ನಿತ್ಯವೂ ದುಬಾರಿ ಬೆಲೆಗೆ ಆಮ್ಲಜನಕ ಸಿಲಿಂಡರ್ ಮಾರುತ್ತಿದ್ದರು. ಈ ಬಗ್ಗೆ ಮಾಹಿತಿ ಬರುತ್ತಿದ್ದಂತೆ ಶುಕ್ರವಾರ ರಾತ್ರಿ ದಾಳಿ ಮಾಡಲಾಯಿತು’ ಎಂದು ಸಿಸಿಬಿ ಪೊಲೀಸರು ಹೇಳಿದರು.
‘47 ಲೀಟರ್ ಸಿಲಿಂಡರ್ಗೆ ₹3,000 ನಿಗದಿಪಡಿಸಲಾಗಿದೆ. ಆದರೆ, ಅದೇ ಸಿಲಿಂಡರ್ನ್ನು ₹6,000 ಮಾರಾಟ ಮಾಡಲಾಗುತ್ತಿತ್ತು. ಆರೋಪಿ ವಿರುದ್ಧ ಪೀಣ್ಯ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ’ ಎಂದೂ ತಿಳಿಸಿದರು.