ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಗರದ ಬಸವ ಸಮಿತಿ ಸಭಾಂಗಣದಲ್ಲಿ ಭಾನುವಾರ ಸಂಜೆ 4 ಗಂಟೆಗೆ ನಡೆಯುವ ಸಮಾರಂಭದಲ್ಲಿ ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಕೃತಿಗಳನ್ನು ಬಿಡುಗಡೆ ಮಾಡುವರು. ಲೇಖಕ ಸುಧೀಂದ್ರ ಕುಲಕರ್ಣಿ, ಕಾಂಗ್ರೆಸ್ ನಾಯಕ ಕೆ. ರೆಹಮಾನ್ ಖಾನ್, ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ ಅತಿಥಿಗಳಾಗಿ ಭಾಗವಹಿಸುವರು ಎಂದರು.