‘ಮಲ್ಲೇಶ್ವರದ ಸರ್ಕಲ್ ಮಾರಮ್ಮ ದೇವಸ್ಥಾನದ ಬಳಿ, ಅಶ್ವತ್ಥ್ ಅವರ ಕ್ಯಾಬ್ಗೆ ಮಹಮ್ಮದ್ ಮುನೀರ್ ಎಂಬುವವರ ಕಾರು ಡಿಕ್ಕಿಯಾಗಿತ್ತು. ಆಗ ಕಾರು ನಿಲ್ಲಿಸುವಂತೆ ಅಶ್ವತ್ಥ್ ಅವರು ಮನವಿ ಮಾಡಿದ್ದರು. ಆದರೆ, ಮುನೀರ್ ವಾಹನ ನಿಲ್ಲಿಸದೆ ಮುಂದಕ್ಕೆ ತೆರಳಲು ಪ್ರಯತ್ನಿಸಿದ್ದರು. ಆಗ, ಅಶ್ವತ್ಥ್ ಅವರು ಕಾರಿನ ಬಾನೆಟ್ ಮೇಲೆ ಹತ್ತಿ ಕೆಳಕ್ಕೆ ಇಳಿಯುವಂತೆ ಮನವಿ ಮಾಡಿದ್ದರು. ಅದನ್ನು ಲೆಕ್ಕಿಸದೇ ಅಶ್ವತ್ಥ್ ಅವರನ್ನು ದೂರಕ್ಕೆ ಎಳೆದೊಯ್ದು ದುಷ್ಕೃತ್ಯ ಎಸಗಲಾಗಿದೆ’