<p><strong>ಬೆಂಗಳೂರು</strong>: ಅಧಿಕ ಹಣ ಪಾವತಿಸುವಂತೆ ಒತ್ತಾಯಿಸಿದ ಕ್ಯಾಬ್ ಚಾಲಕ, ಗ್ರಾಹಕರೊಬ್ಬರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿ, ನಡು ರಸ್ತೆಯಲ್ಲಿ ಹಲ್ಲೆಗೆ ಯತ್ನಿಸಿರುವ ಘಟನೆ ನಗರದಲ್ಲಿ ನಡೆದಿದೆ.</p>.<p>ಪದ್ಮನಾಭನಗರದ ಆರ್. ಕೆ. ಲೇಔಟ್ನಲ್ಲಿ ಈ ಘಟನೆ ನಡೆದಿದ್ದು, ಕ್ಯಾಬ್ ಚಾಲಕ ಕಾಂತರಾಜು ಅವರ ವರ್ತನೆಯಿಂದ ಬೇಸತ್ತ ಗ್ರಾಹಕ ಶುಭಂ ಅವರು ಘಟನೆ ಕುರಿತು ವಿಡಿಯೊ ಮಾಡಿ, ನಂತರ ‘ಎಕ್ಸ್’ ನಲ್ಲಿ ಅದನ್ನು ಪೋಸ್ಟ್ ಮಾಡಿ, ನಗರ ಪೊಲೀಸರಿಗೆ ಟ್ಯಾಗ್ ಮಾಡಿದ್ದಾರೆ.</p>.<p>ಶನಿವಾರ ಬೆಳಿಗ್ಗೆ ತಮ್ಮ ಸಂಬಂಧಿಯೊಬ್ಬರಿಗಾಗಿ ಆರ್. ಕೆ. ಲೇಔಟ್ನಿಂದ ಶುಭಂ ಅವರು ಓಲಾ ಕ್ಯಾಬ್ ಬುಕ್ ಮಾಡಿದ್ದರು. ಡ್ರಾಪ್ ಮುಗಿದ ಬಳಿಕ ಚಾಲಕ, ‘ನಿಗದಿತ ಅಂತರಕ್ಕಿಂತಲೂ 3 ಕಿಲೋಮೀಟರ್ ಹೆಚ್ಚುವರಿಯಾಗಿದೆ, ಆದ್ದರಿಂದ ಹೆಚ್ಚು ಹಣ ಕೊಡಿ’ ಎಂದು ಕೇಳಿದ್ದಾರೆ. ಇದಕ್ಕೆ ನಿರಾಕರಿಸಿದ ಶುಭಂ, ‘ಆ್ಯಪ್ನ ಪ್ರಕಾರ ಹಣ ಪಾವತಿಸುತ್ತೇನೆ, ಅಧಿಕ ಹಣ ಪಾವತಿಸಲು ಸಾಧ್ಯವಿಲ್ಲ’ ಎಂದಿದ್ದಾರೆ.</p>.<p>ಇದೇ ವಿಚಾರಕ್ಕೆ ಕೆಲಕಾಲ ಇಬ್ಬರ ನಡುವೆ ವಾಗ್ವಾದ ನಡೆದಿದೆ. ಕೋಪಗೊಂಡ ಚಾಲಕ, ಕ್ಯಾಬ್ನಿಂದ ಇಳಿದು ಶುಭಂ ಅವರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಹಲ್ಲೆಗೆ ಯತ್ನಿಸಿದ್ದಾರೆ. ಸ್ಥಳೀಯರು ಇಬ್ಬರನ್ನೂ ಸಮಾಧಾನಪಡಿಸಿ ಸ್ಥಳದಿಂದ ಕಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಅಧಿಕ ಹಣ ಪಾವತಿಸುವಂತೆ ಒತ್ತಾಯಿಸಿದ ಕ್ಯಾಬ್ ಚಾಲಕ, ಗ್ರಾಹಕರೊಬ್ಬರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿ, ನಡು ರಸ್ತೆಯಲ್ಲಿ ಹಲ್ಲೆಗೆ ಯತ್ನಿಸಿರುವ ಘಟನೆ ನಗರದಲ್ಲಿ ನಡೆದಿದೆ.</p>.<p>ಪದ್ಮನಾಭನಗರದ ಆರ್. ಕೆ. ಲೇಔಟ್ನಲ್ಲಿ ಈ ಘಟನೆ ನಡೆದಿದ್ದು, ಕ್ಯಾಬ್ ಚಾಲಕ ಕಾಂತರಾಜು ಅವರ ವರ್ತನೆಯಿಂದ ಬೇಸತ್ತ ಗ್ರಾಹಕ ಶುಭಂ ಅವರು ಘಟನೆ ಕುರಿತು ವಿಡಿಯೊ ಮಾಡಿ, ನಂತರ ‘ಎಕ್ಸ್’ ನಲ್ಲಿ ಅದನ್ನು ಪೋಸ್ಟ್ ಮಾಡಿ, ನಗರ ಪೊಲೀಸರಿಗೆ ಟ್ಯಾಗ್ ಮಾಡಿದ್ದಾರೆ.</p>.<p>ಶನಿವಾರ ಬೆಳಿಗ್ಗೆ ತಮ್ಮ ಸಂಬಂಧಿಯೊಬ್ಬರಿಗಾಗಿ ಆರ್. ಕೆ. ಲೇಔಟ್ನಿಂದ ಶುಭಂ ಅವರು ಓಲಾ ಕ್ಯಾಬ್ ಬುಕ್ ಮಾಡಿದ್ದರು. ಡ್ರಾಪ್ ಮುಗಿದ ಬಳಿಕ ಚಾಲಕ, ‘ನಿಗದಿತ ಅಂತರಕ್ಕಿಂತಲೂ 3 ಕಿಲೋಮೀಟರ್ ಹೆಚ್ಚುವರಿಯಾಗಿದೆ, ಆದ್ದರಿಂದ ಹೆಚ್ಚು ಹಣ ಕೊಡಿ’ ಎಂದು ಕೇಳಿದ್ದಾರೆ. ಇದಕ್ಕೆ ನಿರಾಕರಿಸಿದ ಶುಭಂ, ‘ಆ್ಯಪ್ನ ಪ್ರಕಾರ ಹಣ ಪಾವತಿಸುತ್ತೇನೆ, ಅಧಿಕ ಹಣ ಪಾವತಿಸಲು ಸಾಧ್ಯವಿಲ್ಲ’ ಎಂದಿದ್ದಾರೆ.</p>.<p>ಇದೇ ವಿಚಾರಕ್ಕೆ ಕೆಲಕಾಲ ಇಬ್ಬರ ನಡುವೆ ವಾಗ್ವಾದ ನಡೆದಿದೆ. ಕೋಪಗೊಂಡ ಚಾಲಕ, ಕ್ಯಾಬ್ನಿಂದ ಇಳಿದು ಶುಭಂ ಅವರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಹಲ್ಲೆಗೆ ಯತ್ನಿಸಿದ್ದಾರೆ. ಸ್ಥಳೀಯರು ಇಬ್ಬರನ್ನೂ ಸಮಾಧಾನಪಡಿಸಿ ಸ್ಥಳದಿಂದ ಕಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>