ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕರ್ನಾಟಕ ಸರ್ಕಾರ’ ಫಲಕ ತೆರವುಗೊಳಿಸಿ ದಂಡ

Last Updated 19 ಜೂನ್ 2021, 20:10 IST
ಅಕ್ಷರ ಗಾತ್ರ

ಬೆಂಗಳೂರು: ‘ಕರ್ನಾಟಕ ಸರ್ಕಾರ’ ಎಂಬ ಫಲಕ ಅಳವಡಿಸಿಕೊಂಡು ಸಂಚರಿಸುತ್ತಿದ್ದ ವಾಹನಗಳಿಗೆ ನಗರದ ಸಂಚಾರ ಪೊಲೀಸರು ದಂಡ ವಿಧಿಸಿದ್ದಾರೆ.

ನಗರದ ಮಾಗಡಿ ರಸ್ತೆಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿದ ಪೊಲೀಸರು, ವಾಹನಗಳ ಪರಿಶೀಲನೆ ನಡೆಸಿದರು.

‘ವಾಹನಗಳ ಮೇಲೆ ನೋಂದಣಿ ಸಂಖ್ಯೆ ಫಲಕ ಮಾತ್ರ ಅಳವಡಿಸಬೇಕು. ಉಳಿದಂತೆ ಯಾವುದೇ ಬರಹವಿರಬಾರದು. ಆದರೆ, ಕೆಲವು ವಾಹನಗಳಲ್ಲಿ ಕರ್ನಾಟಕ ಸರ್ಕಾರ ಎಂಬ ಫಲಕ ಅಳವಡಿಸಿಕೊಂಡಿದ್ದ ಬಗ್ಗೆ ದೂರುಗಳು ಬಂದಿದ್ದವು. ಹೀಗಾಗಿ, ಕಾರ್ಯಾಚರಣೆ ನಡೆಸಲಾಯಿತು’ ಎಂದು ಪೊಲೀಸರು ಹೇಳಿದರು.

‘25ಕ್ಕೂ ಹೆಚ್ಚು ವಾಹನಗಳ ಫಲಕಗಳನ್ನು ಸ್ಥಳದಲ್ಲೇ ತೆರವುಗೊಳಿಸಿ ದಂಡ ವಿಧಿಸಲಾಗಿದೆ’ ಎಂದೂ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT