‘ನೃಪತುಂಗ ರಸ್ತೆಯಲ್ಲಿ ಬುಧವಾರ ಸಂಜೆ 5.40ರ ಸುಮಾರಿಗೆ ಅಪಘಾತ ಸಂಭವಿಸಿತ್ತು. ಚೆನ್ನಗಂಗಯ್ಯ ಅವರ ಪಕ್ಕೆಲುಬು ಹಾಗೂ ಭುಜಕ್ಕೆ ಪೆಟ್ಟಾಗಿ ತೀವ್ರವಾಗಿ ಗಾಯಗೊಂಡಿದ್ದರು. ಹಾಸ್ಮ್ಯಾಟ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ರಾತ್ರಿ ಅವರು ಅಸುನೀಗಿದರು’ ಎಂದು ಹಲಸೂರು ಗೇಟ್ ಸಂಚಾರ ಪೊಲೀಸರು ಹೇಳಿದರು. ‘ಚೆನ್ನಗಂಗಯ್ಯ ಅವರು ಬೈಕ್ನಲ್ಲಿ ಹೊರಟಿದ್ದರು. ಅದೇ ಸಂದರ್ಭದಲ್ಲಿ ಕೆ.ಆರ್.ವೃತ್ತದ ಕಡೆಯಿಂದ ವೇಗವಾಗಿ ಬಂದ ದ್ವಿಚಕ್ರವಾಹನ ಡಿಕ್ಕಿ ಹೊಡೆದಿತ್ತು. ಅಪಘಾತದ ಬಳಿಕ ದ್ವಿಚಕ್ರ ವಾಹನ ಸಮೇತ ಸವಾರ ಪರಾರಿಯಾಗಿದ್ದಾನೆ’