‘ಹೂವಿನ ಕರಗ ಏಪ್ರಿಲ್ 6ರ ರಾತ್ರಿ 11.30ಕ್ಕೆ ಧರ್ಮರಾಯಸ್ವಾಮಿ ದೇವಾಲಯದಿಂದ ಹೊರಡುವ ಉತ್ಸವ ಹಲಸೂರು ಪೇಟೆಯ ದೇವಾಲಯಗಳಲ್ಲಿ ಪೂಜೆ ಸ್ವೀಕರಿಸಿ, ನಗರ್ತಪೇಟೆ ಮಾರ್ಗವಾಗಿ ಕಬ್ಬನ್ ಪೇಟೆ, ಗಾಣಿಗರ ಪೇಟೆ, ಅವೆನ್ಯೂ ರಸ್ತೆ, ದೊಡ್ಡಪೇಟೆ, ಕೆ.ಆರ್. ಮಾರುಕಟ್ಟೆ, ಆಕ್ಕಿಪೇಟೆ, ಕುಂಬಾರಪೇಟೆ, ಗೊಲ್ಲರಪೇಟೆ, ತಿಗಳರಪೇಟೆ, ಸುಣ್ಣಕಲ್ ಪೇಟೆಗಳಲ್ಲಿ ಸಂಚರಿಸಲಿದೆ’ ಎಂದರು.