ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಶಿವರಾಜ ವಿ. ಪಾಟೀಲ ಮಾತನಾಡಿ, ‘ಪುತ್ಥಳಿಯ ಜೊತೆಗೆ ಮಹಾಪುರುಷರ ಬದುಕು, ಆದರ್ಶ ನೆನಪಾಗಬೇಕು. ನಾಲ್ವಡಿ ಕೃಷ್ಣರಾಜ ಒಡೆಯರ್ ಪುತ್ಥಳಿಯ ಮೂಲಕ ಅವರನ್ನೇ ಕಂಡಂತಾಗಬೇಕು. ನಾಲ್ವಡಿಯವರು ದಾರಿದೀಪವನ್ನು ಸ್ಥಾಪಿಸಿದ್ದರು ಎಂದು ಎಲ್ಲರೂ ನೆನಪು ಮಾಡಿಕೊಳ್ಳುತ್ತಾರೆ. ವಾಸ್ತವವೆಂದರೆ ಅವರು ನಾಡಿನ ಜನರ ಬದುಕಿಗೇ ದಾರಿದೀಪವಾಗಿದ್ದವರು’ ಎಂದು ಹೇಳಿದರು.