ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶದ ಮಹಾಗ್ರಂಥ ಸಂವಿಧಾನ - ಡಿ.ಕೆ. ಶಿವಕುಮಾರ್

Last Updated 26 ನವೆಂಬರ್ 2022, 19:38 IST
ಅಕ್ಷರ ಗಾತ್ರ

ಬೆಂಗಳೂರು: ‘ನಮ್ಮಲ್ಲಿ ಒಂದೊಂದು ಧರ್ಮಕ್ಕೂ ಒಂದೊಂದು ಗ್ರಂಥವಿದೆ. ಆದರೆ, ನಮ್ಮ ದೇಶದ ಮಹಾಗ್ರಂಥ ಸಂವಿಧಾನ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರ ಮದಲ್ಲಿ ಮಾತನಾಡಿದ ಅವರು, ‘ಈ ದೇಶಕ್ಕೆ ಕಾಂಗ್ರೆಸ್ ಪಕ್ಷ ಕೊಟ್ಟಿರುವ ಸಂವಿಧಾನದಲ್ಲಿ ನಮಗೆ ಹಕ್ಕು, ಧ್ವನಿ, ಅವಕಾಶ, ರಕ್ಷಣೆ ಅಡಗಿದೆ’ ಎಂದರು.

‘ಬಿಜೆಪಿ ಏಕರೂಪ ನಾಗರಿಕ ಕಾಯ್ದೆ ಕುರಿತು ಮಾತನಾಡುತ್ತಿದೆ. ಗೊಂದಲ ಸೃಷ್ಟಿಸಿ, ಜನರ ಭಾವನೆ ಕೆರಳಿಸುತ್ತಿದೆ. ಜನರ ವಿಶ್ವಾಸ ಕಳೆದುಕೊಳ್ಳುತ್ತಿರುವ ಕಾರಣಕ್ಕೆ ಅವರು ಈ ಪ್ರಯತ್ನಕ್ಕೆ ಮುಂದಾಗಿದ್ದಾರೆ’ ಎಂದು ದೂರಿದರು.

‘ಬಿಜೆಪಿಯವರು ಮತ ಕದಿಯಲು ಮುಂದಾಗಿದ್ದಾರೆ. ಸರ್ಕಾರಿ ಅಧಿಕಾರಿಗಳ ನಕಲಿ ಗುರುತಿನ ಚೀಟಿ ಮುದ್ರಣ ಮಾಡಿ ಹಂಚಿದ್ದಾರೆ. ನಾಳೆ ನಕಲಿ ಐಎಎಸ್ ಅಧಿಕಾರಿ ಎಂದು ಹೇಳಬಹುದು. ನಾವೆ ಲ್ಲರೂ ಜಾಗೃತರಾಗಬೇಕು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT