ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭೂಹಗರಣ ತನಿಖೆ ವಿವರ ಕೇಳಿದ ಹೈಕೋರ್ಟ್

Last Updated 24 ನವೆಂಬರ್ 2020, 20:59 IST
ಅಕ್ಷರ ಗಾತ್ರ

ಬೆಂಗಳೂರು: ₹500 ಕೋಟಿ ಮೌಲ್ಯದ ಭೂ ಹಗರಣದ ಬಗ್ಗೆ ಸಲ್ಲಿಕೆಯಾಗಿರುವ ದೂರು ಆಧರಿಸಿ ಕೈಗೊಂಡಿರುವ ಕ್ರಮಗಳ ಬಗ್ಗೆ ವರದಿ ಸಲ್ಲಿಸುವಂತೆ ಭಷ್ಟಾಚಾರ ನಿಗ್ರಹ ದಳಕ್ಕೆ(ಎಸಿಬಿ) ಹೈಕೋರ್ಟ್‌ ನಿರ್ದೇಶನ ನೀಡಿದೆ.

ಭೂ ಹಗರಣದ ಆರೋಪದ ಬಗ್ಗೆ ಯಾವುದೇ ಕ್ರಮಗಳನ್ನು ಎಸಿಬಿ ಕೈಗೊಂಡಿಲ್ಲ ಎಂದು ಆರೋಪಿಸಿ ಬೆಂಗಳೂರಿನ ಕೃಷ್ಣ ರಾಮಯ್ಯ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಇದರ ವಿಚಾರಣೆ ನಡೆಸಿತು. ಡಿ.11ರೊಳಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಎಸಿಬಿಗೆ ಸೂಚನೆ ನೀಡಿತು.

‘ಸರ್ಕಾರಿ ಜಮೀನಿನ ಒಂದು ದೊಡ್ಡ ಭಾಗವನ್ನು ಖಾಸಗಿ ವ್ಯಕ್ತಿಗಳಿಗೆ ಮಂಜೂರು ಮಾಡಲಾಗಿದೆ ಎಂದು ಅರ್ಜಿಯಲ್ಲಿ ವಾದಿಸಲಾಗಿದೆ. ಖಾಸಗಿ ವಾಹಿನಿಗಳಲ್ಲಿ ಸುದ್ದಿ ಪ್ರಸಾರವಾದ ನಂತರ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಆಗಿದ್ದ ಎನ್. ಮಂಜುನಾಥ ಪ್ರಸಾದ್ ಅವರು 2020ರ ಜುಲೈನಲ್ಲಿ ವಿಚಾರಣೆ ನಡೆಸಿದ್ದಾರೆ’ ಎಂದು ಅರ್ಜಿದಾರರು ತಿಳಿಸಿದ್ದಾರೆ.

‘ಕನ್ನಳ್ಳಿ, ಲಕ್ಷ್ಮಿಪುರ, ಕೊಡಿಗೇಹಳ್ಳಿ, ಗೌಡಹಳ್ಳಿ ಮತ್ತು ಬೆಂಗಳೂರು ಉತ್ತರ ತಾಲ್ಲೂಕಿನ ಬೀದರಹಳ್ಳಿ, ಬೆಂಗಳೂರು ಪೂರ್ವ ತಾಲ್ಲೂಕಿನ ಕೈಲಾಸಹಳ್ಳಿ ಮತ್ತು ಭೋಗನಹಳ್ಳಿ, ಬೆಟ್ಟಹಲಸೂರು ಸುತ್ತಮುತ್ತ ಸುಮಾರು 37 ಎಕರೆ ಭೂಮಿಯನ್ನು ಖಾಸಗಿ ವ್ಯಕ್ತಿಗಳಿಗೆ ಪರಭಾರೆ ಮಾಡಲಾಗಿದೆ’ ಎಂದು ಮಂಜುನಾಥ ಪ್ರಸಾದ್ ವರದಿ ಸಲ್ಲಿಸಿದ್ದರು.

ಈ ವರದಿ ಆಧರಿಸಿ ಯಾವ ಕ್ರಮ ಕೈಗೊಳ್ಳಲಾಗಿದೆ ಎಂದು ಮುಖ್ಯ ಕಾರ್ಯದರ್ಶಿಗೆ ಹೈಕೋರ್ಟ್‌ ನಿರ್ದೇಶನ ನೀಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT