<p><strong>ಬೆಂಗಳೂರು:</strong> ಕೋವಿಡ್ ಪರಿಕ್ಷಾ ವರದಿ ತಿಳಿಸಲು ಸಮಯ ನಿಗದಿಪಡಿಸದ ಪ್ರಯೋಗಾಲಯಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.</p>.<p>ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಪರೀಕ್ಷೆಗೆ ಗಂಟಲು ದ್ರವ ನೀಡಿದವರೂ ಮೃತಪಟ್ಟ ಬಳಿಕವೂ ವರದಿ ಸಿಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿತು.</p>.<p>‘ಹೈಕೋರ್ಟ್ ಸಿಬ್ಬಂದಿಯೊಬ್ಬರಿಂದ ಮೇ 10ರಂದು ಬೆಳಿಗ್ಗೆ 11.53ಕ್ಕೆ ಬೆಂಗಳೂರಿನ ಸರ್ ಸಿ.ವಿ. ರಾಮನ್ ಜನರಲ್ ಆಸ್ಪತ್ರೆ ಸಿಬ್ಬಂದಿ ಗಂಟಲು ದ್ರವದ ಮಾದರಿ ಸಂಗ್ರಹಿಸಿದ್ದಾರೆ. ಅದಾದ 11 ಗಂಟೆಗಳ ನಂತರ ಪ್ರಯೋಗಾಲಯ ಅದನ್ನು ಪಡೆದುಕೊಂಡಿದೆ. ಮೇ 11ರ ಮಧ್ಯಾಹ್ನ 1 ಗಂಟೆಗೆ ಮಾದರಿ ಪರೀಕ್ಷೆ ಮಾಡಲಾಗಿದೆ. 1.33ರ ವೇಳೆಗೆ ಫಲಿತಾಂಶ ಸಿದ್ಧಗೊಂಡಿದೆ. ಆದರೂ, ವರದಿಯನ್ನು ಸಂಬಂಧಿಸಿದವರಿಗೆ ತಲುಪಿಸಿಲ್ಲ. ಅವರು 12ರ ರಾತ್ರಿ ಮೃತಪಟ್ಟಿದ್ದಾರೆ’ ಎಂದು ಪೀಠ ವಿವರಿಸಿತು.</p>.<p>‘ಮೃತಪಟ್ಟ ವ್ಯಕ್ತಿ ಹೈಕೋರ್ಟ್ ಉದ್ಯೋಗಿ ಎಂಬ ಕಾರಣಕ್ಕೆ ಈ ವಿಷಯ ಕೈಗೆತ್ತಿಕೊಳ್ಳುತ್ತಿಲ್ಲ. ಜನರ ಜೀವದ ಬಗ್ಗೆ ನಾವು ಚಿಂತಿಸುತ್ತಿದ್ದೇವೆ. ವರದಿ ನೀಡಲು ವಿಳಂಬ ಮಾಡಿದವರ ವಿರುದ್ಧ ಕೈಗೊಂಡ ಕ್ರಮಗಳ ಬಗ್ಗೆ ವರದಿ ನೀಡಬೇಕು. ಈ ರೀತಿಯ ಘಟನೆಗಳು ಪುನರಾವರ್ತನೆ ಆಗದಂತೆ ಎಲ್ಲ ಪ್ರಯೋಗಾಲಯಗಳಿಗೆ ನಿರ್ದೇಶನ ನೀಡಬೇಕು’ ಎಂದು ಪೀಠ ಆದೇಶಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕೋವಿಡ್ ಪರಿಕ್ಷಾ ವರದಿ ತಿಳಿಸಲು ಸಮಯ ನಿಗದಿಪಡಿಸದ ಪ್ರಯೋಗಾಲಯಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.</p>.<p>ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಪರೀಕ್ಷೆಗೆ ಗಂಟಲು ದ್ರವ ನೀಡಿದವರೂ ಮೃತಪಟ್ಟ ಬಳಿಕವೂ ವರದಿ ಸಿಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿತು.</p>.<p>‘ಹೈಕೋರ್ಟ್ ಸಿಬ್ಬಂದಿಯೊಬ್ಬರಿಂದ ಮೇ 10ರಂದು ಬೆಳಿಗ್ಗೆ 11.53ಕ್ಕೆ ಬೆಂಗಳೂರಿನ ಸರ್ ಸಿ.ವಿ. ರಾಮನ್ ಜನರಲ್ ಆಸ್ಪತ್ರೆ ಸಿಬ್ಬಂದಿ ಗಂಟಲು ದ್ರವದ ಮಾದರಿ ಸಂಗ್ರಹಿಸಿದ್ದಾರೆ. ಅದಾದ 11 ಗಂಟೆಗಳ ನಂತರ ಪ್ರಯೋಗಾಲಯ ಅದನ್ನು ಪಡೆದುಕೊಂಡಿದೆ. ಮೇ 11ರ ಮಧ್ಯಾಹ್ನ 1 ಗಂಟೆಗೆ ಮಾದರಿ ಪರೀಕ್ಷೆ ಮಾಡಲಾಗಿದೆ. 1.33ರ ವೇಳೆಗೆ ಫಲಿತಾಂಶ ಸಿದ್ಧಗೊಂಡಿದೆ. ಆದರೂ, ವರದಿಯನ್ನು ಸಂಬಂಧಿಸಿದವರಿಗೆ ತಲುಪಿಸಿಲ್ಲ. ಅವರು 12ರ ರಾತ್ರಿ ಮೃತಪಟ್ಟಿದ್ದಾರೆ’ ಎಂದು ಪೀಠ ವಿವರಿಸಿತು.</p>.<p>‘ಮೃತಪಟ್ಟ ವ್ಯಕ್ತಿ ಹೈಕೋರ್ಟ್ ಉದ್ಯೋಗಿ ಎಂಬ ಕಾರಣಕ್ಕೆ ಈ ವಿಷಯ ಕೈಗೆತ್ತಿಕೊಳ್ಳುತ್ತಿಲ್ಲ. ಜನರ ಜೀವದ ಬಗ್ಗೆ ನಾವು ಚಿಂತಿಸುತ್ತಿದ್ದೇವೆ. ವರದಿ ನೀಡಲು ವಿಳಂಬ ಮಾಡಿದವರ ವಿರುದ್ಧ ಕೈಗೊಂಡ ಕ್ರಮಗಳ ಬಗ್ಗೆ ವರದಿ ನೀಡಬೇಕು. ಈ ರೀತಿಯ ಘಟನೆಗಳು ಪುನರಾವರ್ತನೆ ಆಗದಂತೆ ಎಲ್ಲ ಪ್ರಯೋಗಾಲಯಗಳಿಗೆ ನಿರ್ದೇಶನ ನೀಡಬೇಕು’ ಎಂದು ಪೀಠ ಆದೇಶಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>