ನಿಯಮಗಳನ್ನು ಮರುಪರಿಶೀಲಿಸುವಂತೆ ಡಿಸಿಪಿ (ಗುಪ್ತಚರ) ಸಂತೋಷ್ ಬಾಬು ಸಲ್ಲಿಸಿದ್ದ ಪ್ರಮಾಣಪತ್ರ ಬಗ್ಗೆ ಆಘಾತ ವ್ಯಕ್ತಪಡಿಸಿದ ಪೀಠ, ಅಧಿಕಾರಿ ನಡೆಯನ್ನು ತರಾಟೆಗೆ ತೆಗೆದುಕೊಂಡಿತು. ಧಾರ್ಮಿಕ ಸ್ಥಳಗಳಲ್ಲಿ ನಿಯಮ ಉಲ್ಲಂಘನೆ ಕಂಡು ಬಂದರೂ ಕಾನೂನಿನ ಪ್ರಕಾರ ಕ್ರಮ ತೆಗೆದುಕೊಳ್ಳುವ ಬದಲು ನಿಯಮವನ್ನೇ ಪ್ರಶ್ನೆ ಮಾಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿತು. ವಿಚಾರಣೆಯನ್ನು ಜುಲೈ 2ಕ್ಕೆ ಮುಂದೂಡಿತು.