ಬೆಂಗಳೂರು: ‘ನನಗೆ ಈ ಬಾರಿ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ. ವರಿಷ್ಠರು ನನಗೆ ಹೆಚ್ಚಿನ ಜವಾಬ್ದಾರಿ ಕೊಡುತ್ತಾರೆ ಎಂಬ ನಿರೀಕ್ಷೆ ಇದೆ’ ಎಂದು ವಿಧಾನಪರಿಷತ್ ಸದಸ್ಯ ಸಿ.ಪಿ. ಯೋಗೀಶ್ವರ್ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಯಾರನ್ನು ಸಚಿವರನ್ನಾಗಿ ಮಾಡಬೇಕೆಂದು ಹೈಕಮಾಂಡ್, ಮುಖ್ಯಮಂತ್ರಿ ತೀರ್ಮಾನಿಸುತ್ತಾರೆ.ಮಂತ್ರಿ ಮಂಡಲ ವಿಸ್ತರಣೆ ಕುರಿತು ನಿಖರ ಮಾಹಿತಿ ಇಲ್ಲ. ನಾನೂ ದೆಹಲಿಗೆ ಹೋಗಿ ಬಂದಿದ್ದೇನೆ. ಪಕ್ಷ ಹಾಗೂ ಮುಖ್ಯಮಂತ್ರಿ ತೀರ್ಮಾನಕ್ಕೆ ಬದ್ಧ’ ಎಂದರು.
‘ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನನ್ನ ರಾಜಕೀಯ ವಿರೋಧಿಗಳು. ಕುಮಾರಸ್ವಾಮಿ ಸಿ.ಎಂ ಭೇಟಿಯಾಗಿ ಕ್ಷೇತ್ರದ ವಿಚಾರ ಪ್ರಸ್ತಾಪಿಸಿದ್ದಾರೆ ನನಗೆ ಸಚಿವ ಸ್ಥಾನ ತಪ್ಪಿಸುವಷ್ಟು ಪ್ರಭಾವಿ ಅವರಲ್ಲ’ ಎಂದರು.