<p><strong>ಬೆಂಗಳೂರು</strong>: ತಾಯಿಯಿಂದಲೇ ಹತನಾದ ನಾಲ್ಕು ವರ್ಷದ ಬಾಲಕ ಚಿನ್ಮಯ್ ಅಂತ್ಯಕ್ರಿಯೆ ಇಲ್ಲಿನ ಹರಿಶ್ಚಂದ್ರ ಘಾಟ್ನಲ್ಲಿ ಇಂದು(ಬುಧವಾರ) ನಡೆಯಿತು. </p><p>ಅಂತಿಮ ವಿಧಿ ವಿಧಾನವನ್ನು ತಂದೆ ವೆಂಕಟರಮಣ್ ನೆರವೇರಿಸಿದ್ದು, ಅಂತ್ಯಕ್ರಿಯೆ ವೇಳೆ ಕುಟುಂಬದ ಸದಸ್ಯರು ಹಾಜರಿದ್ದರು. ಮಗನ ಮೃತದೇಹ ಮಣ್ಣು ಮಾಡುವ ವೇಳೆ ತಂದೆ ವೆಂಕಟರಮಣ್ ತೀವ್ರ ಭಾವುಕರಾದರು. ಕುಟುಂಬ ಸದಸ್ಯರು ಅವರನ್ನು ಸಮಾಧಾನ ಮಾಡಿದ್ದಾರೆ.</p><p>ಆರೋಪಿ ಸುಚನಾ ಸೇಠ್ ಅವರನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಯನ್ನು ಆರು ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿ ನ್ಯಾಯಾಲಯ ಆದೇಶಿಸಿದೆ.</p><p><strong>ದಾಂಪತ್ಯದಲ್ಲಿ ಬಿರುಕು, ಮಗನ ಕೊಲೆ?</strong></p><p>‘ಮೈಂಡ್ಫುಲ್ ಎ.ಐ ಲ್ಯಾಬ್’ ಕಂಪನಿಯ ಸಿಇಒ ಸುಚನಾ ಸೇಠ್ ಮೂಲತಃ ಕೋಲ್ಕತ್ತದವರು. ಭೌತ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವೀಧರೆಯಾಗಿರುವ ಸೇಠ್, 2008ರಲ್ಲಿ ಬೆಂಗಳೂರಿನ ಖಾಸಗಿ ಕಂಪೆನಿಯಲ್ಲಿ ಉದ್ಯೋಗಕ್ಕೆ ಸೇರಿದ್ದರು. 2010ರಲ್ಲಿ ವೆಂಕಟರಮಣ್ ಎಂಬವರನ್ನು ವಿವಾಹವಾಗಿದ್ದರು. ದಂಪತಿಗೆ 2019ರಲ್ಲಿ ಪುತ್ರ ಚಿನ್ಮಯ್ ಜನಿಸಿದ್ದ. ಈ ವೇಳೆಗಾಗಲೆ ದಾಂಪತ್ಯದಲ್ಲಿ ಬಿರುಕು ಮೂಡಿದ್ದು, ವಿಚ್ಛೇದನಕ್ಕೆ ನ್ಯಾಯಾಲಯದ ಮೆಟ್ಟಿಲೇರಿದ್ದರು.</p><p>ವಿಚ್ಚೇದನದ ನಂತರ ವಾರದ ಒಂದು ದಿನ ಮಗನನ್ನು ನೋಡಲು ತಂದೆ ವೆಂಕಟರಮಣ್ ಬರುತ್ತಿದ್ದು, ಇದು ಸುಚನಾಗೆ ಇಷ್ಟವಿರಲಿಲ್ಲ. ಈ ಕಾರಣಕ್ಕೆ ಮಗನನ್ನು ಕೊಲೆ ಮಾಡಿದ್ದಾರೆ ಎಂದು ಹೇಳಲಾಗಿದೆ.</p><p><strong>ಸೂಟ್ಕೇಸ್ನಲ್ಲಿ ಮಗನ ಶವ</strong></p><p>ಉತ್ತರ ಗೋವಾದ ಹೋಟೆಲ್ವೊಂದರ ಕೊಠಡಿಯನ್ನು ಜ. 6ರಂದು ಬಾಡಿಗೆ ಪಡೆದು ಪುತ್ರನೊಂದಿಗೆ ತಂಗಿದ್ದ ಸುಚನಾ, ಪುತ್ರನನ್ನು ಕೊಲೆ ಮಾಡಿ ಮೃತದೇಹವನ್ನು ಸೂಟ್ಕೇಸ್ಗೆ ತುಂಬಿ ಕಾರಿನಲ್ಲಿ ಗೋವಾದಿಂದ ಬೆಂಗಳೂರಿನತ್ತ ಸಾಗಿಸಲು ಯತ್ನಿಸಿದ್ದರು. </p>.ಹತ್ಯೆಗೂ ಮುನ್ನ ಮಗನಿಗೆ ಕೆಮ್ಮಿನ ಸಿರಪ್ ನೀಡಿದ್ದ ಸುಚನಾ ಸೇಠ್: ಪೊಲೀಸರ ಮಾಹಿತಿ.<p><strong>ಉಸಿರುಗಟ್ಟಿಸಿ ಕೊಲೆ?</strong></p><p>ಮೃತ ಬಾಲಕನ ಮುಖ ಹಾಗೂ ಎದೆಯಲ್ಲಿ ಊತ ಕಾಣಿಸಿಕೊಂಡಿದ್ದು, ಕುತ್ತಿಗೆ ಭಾಗದಲ್ಲಿ ಉಸಿರುಕಟ್ಟಿಸಿ ಕೊಲೆ ಮಾಡಿದ ಸಾಧ್ಯತೆ ಇದೆ ಎಂದು ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯ ಡಾ.ಕುಮಾರ್ ನಾಯ್ಕ ಅವರು ತಿಳಿಸಿದ್ದಾರೆ.</p><p><strong>ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನ</strong></p><p>ಹೋಟೆಲ್ ಕೊಠಡಿಯಲ್ಲಿ ಕತ್ತು ಹಿಸುಕಿ ಪುತ್ರನನ್ನು ಕೊಲೆ ಮಾಡಿರುವ ಸುಚನಾ, ನಂತರ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೈ ಕೊಯ್ದುಕೊಳ್ಳಲು ಪ್ರಯತ್ನಿಸಿದಾಗ ರಕ್ತ ಕೊಠಡಿಯಲ್ಲಿ ಬಿದ್ದಿದೆ. ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರ ಬದಲಿಸಿದ ಆರೋಪಿ, ಬಾಲಕನ ಮೃತದೇಹವನ್ನು ಸೂಟ್ಕೇಸ್ಗೆ ತುಂಬಿದ್ದಾರೆ ಎಂದು ಹೇಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ತಾಯಿಯಿಂದಲೇ ಹತನಾದ ನಾಲ್ಕು ವರ್ಷದ ಬಾಲಕ ಚಿನ್ಮಯ್ ಅಂತ್ಯಕ್ರಿಯೆ ಇಲ್ಲಿನ ಹರಿಶ್ಚಂದ್ರ ಘಾಟ್ನಲ್ಲಿ ಇಂದು(ಬುಧವಾರ) ನಡೆಯಿತು. </p><p>ಅಂತಿಮ ವಿಧಿ ವಿಧಾನವನ್ನು ತಂದೆ ವೆಂಕಟರಮಣ್ ನೆರವೇರಿಸಿದ್ದು, ಅಂತ್ಯಕ್ರಿಯೆ ವೇಳೆ ಕುಟುಂಬದ ಸದಸ್ಯರು ಹಾಜರಿದ್ದರು. ಮಗನ ಮೃತದೇಹ ಮಣ್ಣು ಮಾಡುವ ವೇಳೆ ತಂದೆ ವೆಂಕಟರಮಣ್ ತೀವ್ರ ಭಾವುಕರಾದರು. ಕುಟುಂಬ ಸದಸ್ಯರು ಅವರನ್ನು ಸಮಾಧಾನ ಮಾಡಿದ್ದಾರೆ.</p><p>ಆರೋಪಿ ಸುಚನಾ ಸೇಠ್ ಅವರನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಯನ್ನು ಆರು ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿ ನ್ಯಾಯಾಲಯ ಆದೇಶಿಸಿದೆ.</p><p><strong>ದಾಂಪತ್ಯದಲ್ಲಿ ಬಿರುಕು, ಮಗನ ಕೊಲೆ?</strong></p><p>‘ಮೈಂಡ್ಫುಲ್ ಎ.ಐ ಲ್ಯಾಬ್’ ಕಂಪನಿಯ ಸಿಇಒ ಸುಚನಾ ಸೇಠ್ ಮೂಲತಃ ಕೋಲ್ಕತ್ತದವರು. ಭೌತ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವೀಧರೆಯಾಗಿರುವ ಸೇಠ್, 2008ರಲ್ಲಿ ಬೆಂಗಳೂರಿನ ಖಾಸಗಿ ಕಂಪೆನಿಯಲ್ಲಿ ಉದ್ಯೋಗಕ್ಕೆ ಸೇರಿದ್ದರು. 2010ರಲ್ಲಿ ವೆಂಕಟರಮಣ್ ಎಂಬವರನ್ನು ವಿವಾಹವಾಗಿದ್ದರು. ದಂಪತಿಗೆ 2019ರಲ್ಲಿ ಪುತ್ರ ಚಿನ್ಮಯ್ ಜನಿಸಿದ್ದ. ಈ ವೇಳೆಗಾಗಲೆ ದಾಂಪತ್ಯದಲ್ಲಿ ಬಿರುಕು ಮೂಡಿದ್ದು, ವಿಚ್ಛೇದನಕ್ಕೆ ನ್ಯಾಯಾಲಯದ ಮೆಟ್ಟಿಲೇರಿದ್ದರು.</p><p>ವಿಚ್ಚೇದನದ ನಂತರ ವಾರದ ಒಂದು ದಿನ ಮಗನನ್ನು ನೋಡಲು ತಂದೆ ವೆಂಕಟರಮಣ್ ಬರುತ್ತಿದ್ದು, ಇದು ಸುಚನಾಗೆ ಇಷ್ಟವಿರಲಿಲ್ಲ. ಈ ಕಾರಣಕ್ಕೆ ಮಗನನ್ನು ಕೊಲೆ ಮಾಡಿದ್ದಾರೆ ಎಂದು ಹೇಳಲಾಗಿದೆ.</p><p><strong>ಸೂಟ್ಕೇಸ್ನಲ್ಲಿ ಮಗನ ಶವ</strong></p><p>ಉತ್ತರ ಗೋವಾದ ಹೋಟೆಲ್ವೊಂದರ ಕೊಠಡಿಯನ್ನು ಜ. 6ರಂದು ಬಾಡಿಗೆ ಪಡೆದು ಪುತ್ರನೊಂದಿಗೆ ತಂಗಿದ್ದ ಸುಚನಾ, ಪುತ್ರನನ್ನು ಕೊಲೆ ಮಾಡಿ ಮೃತದೇಹವನ್ನು ಸೂಟ್ಕೇಸ್ಗೆ ತುಂಬಿ ಕಾರಿನಲ್ಲಿ ಗೋವಾದಿಂದ ಬೆಂಗಳೂರಿನತ್ತ ಸಾಗಿಸಲು ಯತ್ನಿಸಿದ್ದರು. </p>.ಹತ್ಯೆಗೂ ಮುನ್ನ ಮಗನಿಗೆ ಕೆಮ್ಮಿನ ಸಿರಪ್ ನೀಡಿದ್ದ ಸುಚನಾ ಸೇಠ್: ಪೊಲೀಸರ ಮಾಹಿತಿ.<p><strong>ಉಸಿರುಗಟ್ಟಿಸಿ ಕೊಲೆ?</strong></p><p>ಮೃತ ಬಾಲಕನ ಮುಖ ಹಾಗೂ ಎದೆಯಲ್ಲಿ ಊತ ಕಾಣಿಸಿಕೊಂಡಿದ್ದು, ಕುತ್ತಿಗೆ ಭಾಗದಲ್ಲಿ ಉಸಿರುಕಟ್ಟಿಸಿ ಕೊಲೆ ಮಾಡಿದ ಸಾಧ್ಯತೆ ಇದೆ ಎಂದು ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯ ಡಾ.ಕುಮಾರ್ ನಾಯ್ಕ ಅವರು ತಿಳಿಸಿದ್ದಾರೆ.</p><p><strong>ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನ</strong></p><p>ಹೋಟೆಲ್ ಕೊಠಡಿಯಲ್ಲಿ ಕತ್ತು ಹಿಸುಕಿ ಪುತ್ರನನ್ನು ಕೊಲೆ ಮಾಡಿರುವ ಸುಚನಾ, ನಂತರ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೈ ಕೊಯ್ದುಕೊಳ್ಳಲು ಪ್ರಯತ್ನಿಸಿದಾಗ ರಕ್ತ ಕೊಠಡಿಯಲ್ಲಿ ಬಿದ್ದಿದೆ. ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರ ಬದಲಿಸಿದ ಆರೋಪಿ, ಬಾಲಕನ ಮೃತದೇಹವನ್ನು ಸೂಟ್ಕೇಸ್ಗೆ ತುಂಬಿದ್ದಾರೆ ಎಂದು ಹೇಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>