ಈ ಚಿತ್ರಣ ಕಂಡದ್ದು ಹುರುಳಿಚಿಕ್ಕನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಐವರಕಂಡಪುರ ಗ್ರಾಮದ ಗ್ರಂಥಾಲಯದಲ್ಲಿ. ಸಂವಿಧಾನ ಸರ್ಮಪಣೆ ದಿನದ ಅಂಗವಾಗಿ ಗ್ರಾಮದ ಮನೆ ಮನೆಗಳಿಗೆ ತೆರಳಿದಪಂಚಾಯಿತಿ ಅಭಿವೃದ್ದಿ ಅಧಿಕಾರಿ ನಾರಾಯಣಸ್ವಾಮಿ, ಮಕ್ಕಳನ್ನು ಗ್ರಂಥಾಲಯಕ್ಕೆ ಕರೆ ತಂದರು. ಪೋಷಕರಿಗೆ, ಶಾಲಾ ಮಕ್ಕಳಿಗೆ ಪುಸ್ತಕಗಳು ಮತ್ತು ಜ್ಞಾನದ ಮಹತ್ವದ ಬಗ್ಗೆ ಅರಿವು ಮೂಡಿಸಿದರು.