ಬೆಂಗಳೂರು: ಜಯಮಹಲ್ ರಸ್ತೆ ಹಾಗೂ ಬಳ್ಳಾರಿ ರಸ್ತೆಗಳನ್ನು ವಿಸ್ತರಿಸುವುದಕ್ಕೆ ಅರಮನೆ ಮೈದಾನದ ಜಾಗವನ್ನು ಸ್ವಾಧೀನಪಡಿಸಿಕೊಳ್ಳುವುದಕ್ಕೆ ಸಂಬಂಧಿಸಿದ ವ್ಯಾಜ್ಯದ ವಿಚಾರಣೆ ಇದೇ ಮಂಗಳವಾರ (ಮೇ 17) ಸುಪ್ರೀಂ ಕೋರ್ಟ್ನಲ್ಲಿ ನಡೆಯಲಿದೆ. ಈ ರಸ್ತೆಗಳ ವಿಸ್ತರಣೆಗೆ ಅರಮನೆ ಮೈದಾನದ ಜಾಗವನ್ನು ವರ್ಗಾಯಿಸಬಹುದಾದ ಅಭಿವೃದ್ಧಿ ಹಕ್ಕು (ಟಿಡಿಆರ್) ನೀಡಿ ಸ್ವಾಧೀನ ಪಡಿಸಿಕೊಳ್ಳಲು ಒಪ್ಪದಿರುವ ತನ್ನ ನಿಲುವಿಗೆ ಬದ್ಧವಾಗಿರಲು ಸರ್ಕಾರ ನಿರ್ಧರಿಸಿದೆ.