<p><strong>ಬೆಂಗಳೂರು: </strong>'ಜನ ಬೆಂಬಲ ಇರುವವರು ರಾಜ್ಯದ ಮುಖ್ಯಮಂತ್ರಿ ಆಗುತ್ತಾರೆ. ಆ ಬಗ್ಗೆ ಇನ್ನು ಮಾತನಾಡುವುದಿಲ್ಲ' ಎಂದು ಕಾಂಗ್ರೆಸ್ ಶಾಸಕ ಬಿ.ಜೆಡ್. ಜಮೀರ್ ಅಹಮ್ಮದ್ ಖಾನ್ ಹೇಳಿದರು.</p>.<p>ಸಿದ್ದರಾಮಯ್ಯ ನಿವಾಸದ ಬಳಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, 'ಮುಂದಿನ ಮುಖ್ಯಮಂತ್ರಿ ವಿಚಾರದಲ್ಲಿ ಮಾತನಾಡದಂತೆ ನಮ್ಮ ನಾಯಕರು ಸೂಚನೆ ನೀಡಿದ್ದಾರೆ. ಆ ಬಗ್ಗೆ ಇನ್ನು ಯಾವುದೇ ಹೇಳಿಕೆಯನ್ನೂ ನಾನು ನೀಡುವುದಿಲ್ಲ' ಎಂದರು.</p>.<p>'ಲಿಂಗಾಯತರಲ್ಲಿ ಎಂ.ಬಿ. ಪಾಟೀಲ್, ಅಲ್ಪಸಂಖ್ಯಾತರಲ್ಲಿ ಸಿ.ಎಂ. ಇಬ್ರಾಹಿಂ ಮತ್ತು ತನ್ವೀರ್ ಸೇಠ್ ಅವರು ಮುಖ್ಯಮಂತ್ರಿ ಹುದ್ದೆ ಆಕಾಂಕ್ಷಿಗಳಾಗಿದ್ದಾರೆ. ಅಂತಿಮವಾಗಿ ಯಾರು ಮುಖ್ಯಮಂತ್ರಿ ಎಂಬುದನ್ನು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸುತ್ತದೆ' ಎಂದು ಹೇಳಿದರು.</p>.<p>'ನಾನು ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿ ಅಲ್ಲ. ನಾನಿನ್ನೂ ಆ ಮಟ್ಟಕ್ಕೆ ಹೋಗಿಲ್ಲ. ನನ್ನನ್ನು ಎಲ್ ಕೆಜಿ ಎಂದು ಸಿ.ಎಂ. ಇಬ್ರಾಹಿಂ ಹೇಳಿದ್ದಾರೆ. ಎಲ್ಕೆಜಿಯವನಿಗೆ ಮುಖ್ಯಮಂತ್ರಿ ಸ್ಥಾನ ಸಿಗುತ್ತಾ' ಎಂದು ವ್ಯಂಗ್ಯವಾಗಿ ಪ್ರಶ್ನಿಸಿದರು.</p>.<p>ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರು ಎಂಬುದನ್ನು ಜನರು ಮತ್ತು ಪಕ್ಷದ ಹೈಕಮಾಂಡ್ ತೀರ್ಮಾನಿಸಬೇಕು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>'ಜನ ಬೆಂಬಲ ಇರುವವರು ರಾಜ್ಯದ ಮುಖ್ಯಮಂತ್ರಿ ಆಗುತ್ತಾರೆ. ಆ ಬಗ್ಗೆ ಇನ್ನು ಮಾತನಾಡುವುದಿಲ್ಲ' ಎಂದು ಕಾಂಗ್ರೆಸ್ ಶಾಸಕ ಬಿ.ಜೆಡ್. ಜಮೀರ್ ಅಹಮ್ಮದ್ ಖಾನ್ ಹೇಳಿದರು.</p>.<p>ಸಿದ್ದರಾಮಯ್ಯ ನಿವಾಸದ ಬಳಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, 'ಮುಂದಿನ ಮುಖ್ಯಮಂತ್ರಿ ವಿಚಾರದಲ್ಲಿ ಮಾತನಾಡದಂತೆ ನಮ್ಮ ನಾಯಕರು ಸೂಚನೆ ನೀಡಿದ್ದಾರೆ. ಆ ಬಗ್ಗೆ ಇನ್ನು ಯಾವುದೇ ಹೇಳಿಕೆಯನ್ನೂ ನಾನು ನೀಡುವುದಿಲ್ಲ' ಎಂದರು.</p>.<p>'ಲಿಂಗಾಯತರಲ್ಲಿ ಎಂ.ಬಿ. ಪಾಟೀಲ್, ಅಲ್ಪಸಂಖ್ಯಾತರಲ್ಲಿ ಸಿ.ಎಂ. ಇಬ್ರಾಹಿಂ ಮತ್ತು ತನ್ವೀರ್ ಸೇಠ್ ಅವರು ಮುಖ್ಯಮಂತ್ರಿ ಹುದ್ದೆ ಆಕಾಂಕ್ಷಿಗಳಾಗಿದ್ದಾರೆ. ಅಂತಿಮವಾಗಿ ಯಾರು ಮುಖ್ಯಮಂತ್ರಿ ಎಂಬುದನ್ನು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸುತ್ತದೆ' ಎಂದು ಹೇಳಿದರು.</p>.<p>'ನಾನು ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿ ಅಲ್ಲ. ನಾನಿನ್ನೂ ಆ ಮಟ್ಟಕ್ಕೆ ಹೋಗಿಲ್ಲ. ನನ್ನನ್ನು ಎಲ್ ಕೆಜಿ ಎಂದು ಸಿ.ಎಂ. ಇಬ್ರಾಹಿಂ ಹೇಳಿದ್ದಾರೆ. ಎಲ್ಕೆಜಿಯವನಿಗೆ ಮುಖ್ಯಮಂತ್ರಿ ಸ್ಥಾನ ಸಿಗುತ್ತಾ' ಎಂದು ವ್ಯಂಗ್ಯವಾಗಿ ಪ್ರಶ್ನಿಸಿದರು.</p>.<p>ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರು ಎಂಬುದನ್ನು ಜನರು ಮತ್ತು ಪಕ್ಷದ ಹೈಕಮಾಂಡ್ ತೀರ್ಮಾನಿಸಬೇಕು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>